ಸಾಂದರ್ಭಿಕ ಚಿತ್ರ 
ರಾಜ್ಯ

ಮಂಡ್ಯ: ಕೋವಿಡ್-19 ಬಗ್ಗೆ ಜನರಲ್ಲಿ ಹೆಚ್ಚಾಗುತ್ತಿರುವ ಅಲಕ್ಷ್ಯ, ಗ್ರಾಮ ಮಟ್ಟದ ಕಾರ್ಯಪಡೆಗೆ ಪುನರುಜ್ಜೀವನ

ಕೋವಿಡ್ ಪ್ರಕರಣಗಳು ಕಡಿಮೆಯಾಗುವುದರೊಂದಿಗೆ ಅನೇಕರು ಅಲಕ್ಷ್ಯವಹಿಸಿದ್ದು, ಕೋವಿಯಡ್ ನಿರ್ಬಂಧಗಳ ಬಗ್ಗೆ ನಿಗಾ ವಹಿಸಲು ಮತ್ತು ಜಾಗೃತಿ ಮೂಡಿಸಲು ಮಂಡ್ಯದ ಅಧಿಕಾರಿಗಳು ಗ್ರಾಮ ಮಟ್ಟದ ಕಾರ್ಯಪಡೆ ತಂಡಗಳನ್ನು ಪುನರುಜ್ಜೀವನಗೊಳಿಸುತ್ತಿದ್ದಾರೆ.

ಮಂಡ್ಯ: ಕೋವಿಡ್ ಪ್ರಕರಣಗಳು ಕಡಿಮೆಯಾಗುವುದರೊಂದಿಗೆ ಅನೇಕರು ಅಲಕ್ಷ್ಯವಹಿಸಿದ್ದು, ಕೋವಿಯಡ್ ನಿರ್ಬಂಧಗಳ ಬಗ್ಗೆ ನಿಗಾ ವಹಿಸಲು ಮತ್ತು ಜಾಗೃತಿ ಮೂಡಿಸಲು ಮಂಡ್ಯದ ಅಧಿಕಾರಿಗಳು ಗ್ರಾಮ ಮಟ್ಟದ ಕಾರ್ಯಪಡೆ ತಂಡಗಳನ್ನು ಪುನರುಜ್ಜೀವನಗೊಳಿಸುತ್ತಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿನಲ್ಲಿ ಕೋವಿಡ್-19 ಪ್ರಕರಣಗಳು ಮತ್ತು ಮರಣ ಪ್ರಮಾಣ ತೀವ್ರಗತಿಯಲ್ಲಿ ಕುಸಿತವಾಗಿದ್ದು, ಸದ್ಯ 819 ಸಕ್ರಿಯ ಪ್ರಕರಣಗಳಿವೆ. 

ಬದಲಾಗುತ್ತಿರುವ ಪರಿಸ್ಥಿತಿ ಮತ್ತು ಎಲ್ಲಾ ಚಟುವಟಿಕೆಗಳು ನಡೆಯುತ್ತಿರುವುದರೊಂದಿಗೆ ಅನೇಕ ಜನರು ಕೋವಿಡ್ ಮಾನದಂಡಗಳನ್ನು ಅನುಸರಿಸುತ್ತಿಲ್ಲ. ಹೀಗಾಗಿ ಕಾರ್ಯಪಡೆಯನ್ನು ಪುನರುಜ್ಜೀವನಗೊಳಿಸಲಾಗುತ್ತಿದೆ.

ಅಶಾ ಕಾರ್ಯಕರ್ತೆಯರು, ಕಿರಿಯ ಆರೋಗ್ಯ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತೆಯರು, ವಾಟರ್ ಮೆನ್, ಶಿಕ್ಷಕರು ಮತ್ತಿತರ ಸಿಬ್ಬಂದಿಗಳು ಬೀದಿಗಳಲ್ಲಿ ತೆರಳಿ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಪಾಲನೆ ಮತ್ತಿತರ ಸುರಕ್ಷತಾ ಕ್ರಮಗಳು ಹಾಗೂ ದೆಹಲಿ, ಕೇರಳದಂತಯೇ ಎರಡನೇ ಅಲೆ ಸಾಧ್ಯತೆ ಬಗ್ಗೆ ಅರಿವು ಮೂಡಿಸಲಿದ್ದಾರೆ ಎಂದು ಮಂಡ್ಯ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್. ಪಿ. ಮಂಚೇಗೌಡ ಹೇಳಿದರು.

ನಿಯಮ ಉಲ್ಲಂಘನೆಯ ಬಗ್ಗೆ ಎಚ್ಚರಿಕೆ ವಹಿಸಲು ತಂಡವು ಗ್ರಾಮ ಪಂಚಾಯಿತಿ ಅಧಿಕಾರಿಗಳೊಂದಿಗೆ ಸಹಕರಿಸಲಿದೆ. ತಾಲೂಕ್ ಮಟ್ಟದ ಜಾಗೃತಿ ಮೆರವಣಿಗೆ ಕೂಡಾ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT