ರಾಜ್ಯ

ಶಿರಾ ಉಪ ಚುನಾವಣೆ ಸ್ಪರ್ಧಿ, ಮಾಜಿ ಸಚಿವ ಟಿ. ಬಿ. ಜಯಚಂದ್ರ ದಂಪತಿಗೆ ಕೊರೋನಾ ಸೋಂಕು

Nagaraja AB

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಮತ್ತು ಪತ್ನಿ ಜಿ.ಎಚ್.ನಿರ್ಮಲಾ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಯಚಂದ್ರ ಅವರು ಬಿಜೆಪಿಯ ರಾಜೇಶ್‌ ಗೌಡ ಮತ್ತು ಜೆಡಿಎಸ್‌ ಅಭ್ಯರ್ಥಿ ಅಮ್ಮಜಮ್ಮ ಅವರ ವಿರುದ್ಧ ಸ್ಪರ್ಧಿಸಿದ್ದರು. ಮಂಗಳವಾರ ಚುನಾವಣಾ ಫಲಿತಾಂಶ ಹೊರಬೀಳಲಿದೆ.

ಮೂಲಗಳ ಪ್ರಕಾರ, ಜಯಚಂದ್ರ ಅವರಿಗೆ ವಿಪರೀತ ಕೆಮ್ಮು ಹಾಗೂ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 

SCROLL FOR NEXT