ರಾಜ್ಯ

13 ವರ್ಷದ ಪ್ರೇಮ, ಎರಡು ಗರ್ಭಪಾತ: ಮದುವೆ ದಿನ ನಾಪತ್ತೆಯಾದ 'ವರ'ನ ಮನೆ ಮುಂದೆ ಯುವತಿ ಪ್ರತಿಭಟನೆ!

ಕಳೆದ 13 ವರ್ಷಗಳಿಂದ ಪ್ರೀತಿಸಿದ್ದ ಯುವಕ ಮದುವೆಯ ದಿನವೇ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಇದೀಗ ಯುವತಿಯ ಮನೆಯವರು ಕಾಣೆಯಾಗಿರುವ "ವರ"ನಿಗಾಗಿ ಶೋಧ ನಡೆಸಿದ್ದಾರೆ.

ಉಡುಪಿ: ಕಳೆದ 13 ವರ್ಷಗಳಿಂದ ಪ್ರೀತಿಸಿದ್ದ ಯುವಕ ಮದುವೆಯ ದಿನವೇ ನಾಪತ್ತೆಯಾಗಿರುವ ಆಘಾತಕಾರಿ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಇದೀಗ ಯುವತಿಯ ಮನೆಯವರು ಕಾಣೆಯಾಗಿರುವ "ವರ"ನಿಗಾಗಿ ಪೋಲೀಸ್ ಠಾಣೆ ಮೆಟ್ಟಿಲೇರಿದ್ದಾರೆ

ಸುದೀರ್ಘ ಕಾಲದಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದ ಪರ್ಕಳದ ಗಣೇಶ್ ಹಾಗೂ ಮಣಿಪಾಲದ ಯುವತಿ ವಿವಾಹವಾಗಲು ತೀರ್ಮಾನಿಸಿದರು.  ಪ್ರೀತಿಸುತ್ತಿದ್ದ ಜೋಡಿಯ ಮದುವೆಗೆ ಕಡೆಗೂ ಮನೆಯವರೆಲ್ಲಾ ಒಪ್ಪಿಗೆ ಸೂಚಿಸಿದ್ದು ವಿವಾಹ ನಿಕ್ಕಿಯಾಗಿತ್ತು. ಆದರೆ ವಿವಾಹದ ದಿನವೇ ಗಣೇಶ್ ಕಾಣೆಯಾಗಿದ್ದಾನೆ. ಈ ಕಾರಣ ಮದುವೆ ನಿಂತು ಹೋಗಿದ್ದು ಯುವತಿ ಗಣೇಶ್ ಮನೆ ಮುಂದೆ ಪ್ರತಿಭಟನೆ ನಡೆಸಿದ್ದಾಳೆ.

13 ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಅಲ್ಲದೆ ಇಬ್ಬರ ನಡುವೆ ದೈಹಿಕ ಸಂಪರ್ಕ ಸಹ ಏರ್ಪಟ್ಟಿತ್ತು ಎಂದು ಹೇಳಲಾಗುತ್ತದೆ. ಯುವತಿ ಇದು ನಿಜವಾದ ಪ್ರೀತಿ ಎಂದು ನಂಬಿದ್ದಳು ಮತ್ತು ಗಣೇಶ್ ಆಕೆಯನ್ನು ಒಂದು ದಿನ ಮದುವೆಯಾಗುವುದಾಗಿ ಖಚಿತಪಡಿಸಿದ್ದ ಕಾರಣ ಆಕೆ ಅವನ ಮಾತಿಗೆ ಒಪ್ಪಿದ್ದಳು.

ಈ ಸಂಬಂಧದ ಪರಿಣಾಮವಾಗಿ ಯುವತಿ ಎರಡು ಬಾರಿ ಗರ್ಭಿಣಿಯಾಗಿದ್ದಳು. ಆದರೆ ಗಣೇಶ್ ಎರಡೂ ಬಾರಿ ಗರ್ಭಪಾತ ಮಾಡಿಸುವಂತೆ ಹೇಳಿದ್ದನು.  ಆದರೆ ಆತನು ಯುವತಿಯನ್ನಿನ್ನೂ ಮದುವೆಯಾಗಿರಲಿಲ್ಲ.ನಂತರ,ಯುವತಿಯ ಒತ್ತಡಕ್ಕೆ ಮಣಿದ ಗಣೇಶ್ ಮದುವೆಗೆ ಸಿದ್ಧರಾಗಿರುವಂತೆ ವರ್ತಿಸಿದರು ಯುವತಿಯ ಕುಟುಂಬ ಕೂಡ ಮೈತ್ರಿಗೆ ಒಪ್ಪಿಕೊಂಡಿತು. ಗಣೇಶ್ ನವೆಂಬರ್ 6ರಂದು ವಿವಾಹವಾಗಲು ಒಪ್ಪಿದ್ದನು.  ಅದರಂತೆ ವಿವಾಹ ಪೂರ್ವದ ಎಲ್ಲಾ ಆಚರಣೆಗಳೂ ನಡೆದಿದ್ದವು. ಆದರೆ ಗಣೇಶ್ ನವೆಂಬರ್ 4 ರಂದು ಇನ್ನೊಬ್ಬ ಹುಡುಗಿಯೊಂದಿಗೆ ರಹಸ್ಯವಾಗಿ ವಿವಾಹವಾಗಲು ತಯಾರಾಗಿದ್ದ.

ಯುವತಿ ಈ ಯೋಜನೆಯನ್ನು ಅರಿತು ಮಧ್ಯಪ್ರವೇಶಿಸಿದ್ದಳು.ಅಲ್ಲದೆ ಆ "ಮದುವೆ"ಯನ್ನು ನಿಲ್ಲಿಸುವಲ್ಲಿ ಯಶಸ್ವಿಯಾಗಿದ್ದಳು.  ಆ ನಂತರ ಗಣೇಶ್ ತನ್ನ ದೀರ್ಘಾವಧಿಯ ಪ್ರೇಮಿಯನ್ನು ನವೆಂಬರ್ 6 ರಂದು ಮದುವೆಯಾಗಲು ಒಪ್ಪಿಕೊಂಡನು, ಆದರೆ  ಮದುವೆಯ ದಿನದಂದು, ವಧು ಸಂಪೂರ್ಣವಾಗಿ ಅಲಂಕರಿಸಿಕೊಂಡು ವಿವಾಹ ಮಂಟಪಕ್ಕೆ ಆಗಮಿಸಿದ್ದಾಗ "ವರ" ಗನೇಶ್ ಅಲ್ಲಿರಲಿಲ್ಲ.ಯುವತಿಯ ಕುಟುಂಬ ಸದಸ್ಯರು ಆತನ ಮನೆಗೆ ಹೋಗಿ ಆತ ನಾಪತ್ತೆಯಾಗಿದ್ದನ್ನು ಖಚಿತಪಡಿಸಿಕೊಂಡಿದ್ದಾರೆ. ಆತನ ಮೊಬೈಲ್ ಸಹ ಸ್ವಿಚ್ ಆಫ್ ಆಗಿತ್ತು. ಯುವತಿ ಆತನನ್ನು ಪತ್ತೆ ಮಾಡಲು ಮಾಡಿರುವ ಎಲ್ಲಾ ಪ್ರಯತ್ನ ವಿಫಲವಾದ ನಂತರ, ಅವನ ಮನೆಯ ಮುಂದೆ ಪ್ರತಿಭಟನೆ ನಡೆಸಿದ್ದಾಳೆ. ಕಳೆದ ಎರಡು ದಿನಗಳಿದ  ಯುವತಿ ಕುಟುಂಬ ಗಣೇಶ್ ಮನೆ ಎದುರು ಪ್ರತಿಭಟನೆ ನಡೆಸುತ್ತಿದ್ದರೂ ಸಹ  ಆತನ ಸುಳಿವಿಲ್ಲ. ಹಾಗಾಗಿ ಇದೀಗ ಯುವತಿಯ ಕುಟುಂಬ ಮಣಿಪಾಲ ಪೋಲೀಸ್ ಠಾಣೆ ಮೆಟ್ಟಿಲೇರಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT