ಸಂಗ್ರಹ ಚಿತ್ರ 
ರಾಜ್ಯ

ಬಿಡಿಎ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳಬಹುದೇ ಪರಿಶೀಲಿಸಿ: ಸರ್ಕಾರಕ್ಕೆ ಹೈಕೋರ್ಟ್

ತನಿಖಾ ಸಂಸ್ಥೆಗಳಿಗೆ ತಮ್ಮ ಅನುಮತಿ ಇಲ್ಲದೆಯೇ ಯಾವುದೇ ದಾಖಲೆ, ಮಾಹಿತಿ ನೀಡದಂತೆ ಅಧಿಕಾರಿಗಳಿಗೆ ಸೂಚಿಸಿ ಬಿಡಿಎ ಹೊರಡಿಸಿರುವ ಆದೇಶ ಪರಿಶೀಲಿಸಿ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. 

ಬೆಂಗಳೂರು: ತನಿಖಾ ಸಂಸ್ಥೆಗಳಿಗೆ ತಮ್ಮ ಅನುಮತಿ ಇಲ್ಲದೆಯೇ ಯಾವುದೇ ದಾಖಲೆ, ಮಾಹಿತಿ ನೀಡದಂತೆ ಅಧಿಕಾರಿಗಳಿಗೆ ಸೂಚಿಸಿ ಬಿಡಿಎ ಹೊರಡಿಸಿರುವ ಆದೇಶ ಪರಿಶೀಲಿಸಿ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. 

ಬಿಡಿಎ ಆಯುಕ್ತರ ಆದೇಶ ಪ್ರಶ್ನಿಸಿ ಎಸ್.ಅರುಣಾಚಲಂ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು. 

ವಿಚಾರಣೆ ವೇಳೆ ಪ್ರತಿಕ್ರಿಯಿಸಿದ ನ್ಯಾಯಪೀಠ, ತನಿಖಾ ಸಂಸ್ಥೆಗಳಿಗೆ ಆಯುಕ್ತರ ಅನುಮತಿ ಇಲ್ಲದೆ ಮಾಹಿತಿ ಅಥವಾ ದಾಖಲೆ ನೀಡಬಾರದು ಎಂಬ ಆದೇಶ ಎಷ್ಟು ಸರಿ, ಇದರಿಂದ ತನಿಖಾ ಸಂಸ್ಥೆಗಳ ಕಾರ್ಯಕ್ಕೆ ಅಡ್ಡಿಯಾಗುವುದಿಲ್ಲವೇ ಎಂದು ಬಿಡಿ ಪರ ವಕೀಲರನ್ನು ಪ್ರಶ್ನಿಸಿತು. 

ಬಿಡಿಎ ಪರ ವಕೀಲರು ಉತ್ತರಿಸಿ, ತನಿಖಾ ಸಂಸ್ಥೆಗಳಿಗೆ ಮಾಹಿತಿ ನೀಡಬಾರದು ಎಂದು ಎಲ್ಲಿಯೂ ಹೇಳಿಲ್ಲ. ಸಿಬ್ಬಂದಿ ತನಿಖೆಗೆ ಮಾಹಿತಿ ನೀಡುವ ಮುನ್ನ ಆಯುಕ್ತರಿಗೆ ತಿಳಿಸಿ ಹೋಗಬೇಕೆಂದು ಹೇಳಲಾಗಿದೆ. ಆದೇಶವನ್ನು ಇಂಗ್ಲೀಷ್ ಭಾಷಾಂತರ ಮಾಡುವಾಗ ಸ್ವಲ್ಪ ಏರುಪೇರಾಗಿದೆ ಎಂದು ತಿಳಿಸುವ ಮೂಲಕ ಆಯುಕ್ತರ ಆದೇಶವನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿದರು. 

ಅದರಿಂದ ಬೇಸಗೊಂಡ ನ್ಯಾಯಪೀಠ, ತನಿಖಾ ಸಂಸ್ಥೆಗಳಿಗೆ ತಮ್ಮನ್ನು ಕೇಳಿಯೇ ಮಾಹಿತಿ ನೀಡಬೇಕೆಂದು ಆಯುಕ್ತರು ಹೊರಡಿಸಿರುವ ಆದೇಶ ಸೂಕ್ತ ಎನಿಸುತ್ತಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಆಯುಕ್ತರ ಆದೇಶ ಪರಿಶೀಲಿಸಿ ಸೂಕ್ತ ಕ್ರಮ ಜರುಗಿಸಬೇಕೆಂದು ಈ ವಿಚಾರವಾಗಿ ನ್ಯಾಯಾಲಯ ಮುಂದಿನ ವಿಚಾರಣೆ ವೇಳೆ ಆದೇಶ ಹೊರಡಿಸಲಿದೆ ಎಂದು ತಿಳಿಸಿ, ವಿಚಾರಣೆಯನ್ನು ನ.24ಕ್ಕೆ ಮುಂದೂಡಿತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT