ರಾಜ್ಯ

ನೂತನ ಶಾಸಕ ಮುನಿರತ್ನಗೆ ಹೈಕೋರ್ಟ್ ಶಾಕ್! ನಕಲಿ ಗುರುತಿನ ಚೀಟಿ ಪ್ರಕರಣದ ಪರಿಶೀಲನೆಗೆ ಸೂಚನೆ

ನಕಲಿ ಗುರುತಿನ ಚೀಟಿ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರದ ನೂತನ ಶಾಸಕರಗಿ ಆಯ್ಕೆಯಾಗಿರುವ ಮುನಿರತ್ನ ಅವರಿಗೆ ಹೈಕೋರ್ಟ್ ಶಾಕ್ ನೀಡಿದೆ. 2018ರ ಚುನಾವಣೆಯ ವೇಳೆ ಪತ್ತೆಯಾದ ನಕಲಿ ಗುರುತಿನ ಚೀಟಿಗಳಿಗೆ ಸಂಬಂಧಿಸಿ ಪೋಲೀಸ್ ತನಿಖೆಯ ಪರಿಶೀಲನಾ ವರದಿ ಸಲ್ಲಿಸಲು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ನೇಮಕ ಮಾಡುವಂತೆ ನ್ಯಾಯಾಲಯ ಸೂಚಿಸಿದೆ.

ಬೆಂಗಳೂರು: ನಕಲಿ ಗುರುತಿನ ಚೀಟಿ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರದ ನೂತನ ಶಾಸಕರಗಿ ಆಯ್ಕೆಯಾಗಿರುವ ಮುನಿರತ್ನ ಅವರಿಗೆ ಹೈಕೋರ್ಟ್ ಶಾಕ್ ನೀಡಿದೆ. 2018ರ ಚುನಾವಣೆಯ ವೇಳೆ ಪತ್ತೆಯಾದ ನಕಲಿ ಗುರುತಿನ ಚೀಟಿಗಳಿಗೆ ಸಂಬಂಧಿಸಿ ಪೋಲೀಸ್ ತನಿಖೆಯ ಪರಿಶೀಲನಾ ವರದಿ ಸಲ್ಲಿಸಲು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ನೇಮಕ ಮಾಡುವಂತೆ ನ್ಯಾಯಾಲಯ ಸೂಚಿಸಿದೆ.

ನಕಲಿ ಗುರುತಿನ ಚೀಟಿ ಪ್ರಕರಣವನ್ನು ಪೋಲೀಸರು ಸರಿಯಾದ ಕ್ರಮದಲ್ಲಿ ತನಿಖೆ ಮಾಡಿಲ್ಲ ಅದಕ್ಕಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಎನ್. ಆನಂದ್ ಕುಮಾರ್ ಹಾಗೂ ಜಿ. ಸಂತೋಷ್ ಕುಮಾರ್ ಎನ್ನುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಇಂದು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪಿಠ ವಿಚಾರಣೆ ನಡೆಸಿ ತನಿಖೆ ಸೂಕ್ತ ರೀತಿಯಲ್ಲಿ ನಡೆದಿದೆಯೆ ಎಲ್ಲವೆ ನ್ನುವುದನ್ನು ಪರಿಶೀಲಿಸಲು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ನೇಮಕ ಮಾಡಬೇಕು. ಅವರು ಪರಿಶೀಲನೆ ನಡೆಸಿ ಡಿಸೆಂಬರ್ 15ರೊಳಗೆ ಮುಚ್ಚಿದ ಲಕೋಟೆಯಲ್ಲಿಕೋರ್ಟ್ ಗೆ ವರದಿ ನೀಡಬೇಕು ಎಂದು ಆದೇಶಿಸಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 18ಕ್ಕೆ ನಿಗದಿ ಮಾಡಲಾಗಿದೆ.

ಮುನಿರತ್ನ ಅವರು ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ನಿಂದ ಸ್ಪರ್ಧಿಸಿ ಐವತ್ತು ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ರಾಜ್ಯದಲ್ಲಿ ನಡೆದ ಎರಡು ಕ್ಷೇತ್ರಗಳಾದ ಶಿರಾ ಹಾಗೂ ರಾಜರಾಜೇಶ್ವರಿ ನಗರದ ಉಪಚುನಾವಣೆ ಫಲಿತಾಂಶ ನಿನ್ನೆ (ಮಂಗಳವಾರ) ಘೋಷಣೆಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT