ರಾಜ್ಯ

ನೂತನ ಶಾಸಕ ಮುನಿರತ್ನಗೆ ಹೈಕೋರ್ಟ್ ಶಾಕ್! ನಕಲಿ ಗುರುತಿನ ಚೀಟಿ ಪ್ರಕರಣದ ಪರಿಶೀಲನೆಗೆ ಸೂಚನೆ

ನಕಲಿ ಗುರುತಿನ ಚೀಟಿ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರದ ನೂತನ ಶಾಸಕರಗಿ ಆಯ್ಕೆಯಾಗಿರುವ ಮುನಿರತ್ನ ಅವರಿಗೆ ಹೈಕೋರ್ಟ್ ಶಾಕ್ ನೀಡಿದೆ. 2018ರ ಚುನಾವಣೆಯ ವೇಳೆ ಪತ್ತೆಯಾದ ನಕಲಿ ಗುರುತಿನ ಚೀಟಿಗಳಿಗೆ ಸಂಬಂಧಿಸಿ ಪೋಲೀಸ್ ತನಿಖೆಯ ಪರಿಶೀಲನಾ ವರದಿ ಸಲ್ಲಿಸಲು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ನೇಮಕ ಮಾಡುವಂತೆ ನ್ಯಾಯಾಲಯ ಸೂಚಿಸಿದೆ.

ಬೆಂಗಳೂರು: ನಕಲಿ ಗುರುತಿನ ಚೀಟಿ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರದ ನೂತನ ಶಾಸಕರಗಿ ಆಯ್ಕೆಯಾಗಿರುವ ಮುನಿರತ್ನ ಅವರಿಗೆ ಹೈಕೋರ್ಟ್ ಶಾಕ್ ನೀಡಿದೆ. 2018ರ ಚುನಾವಣೆಯ ವೇಳೆ ಪತ್ತೆಯಾದ ನಕಲಿ ಗುರುತಿನ ಚೀಟಿಗಳಿಗೆ ಸಂಬಂಧಿಸಿ ಪೋಲೀಸ್ ತನಿಖೆಯ ಪರಿಶೀಲನಾ ವರದಿ ಸಲ್ಲಿಸಲು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರ ನೇಮಕ ಮಾಡುವಂತೆ ನ್ಯಾಯಾಲಯ ಸೂಚಿಸಿದೆ.

ನಕಲಿ ಗುರುತಿನ ಚೀಟಿ ಪ್ರಕರಣವನ್ನು ಪೋಲೀಸರು ಸರಿಯಾದ ಕ್ರಮದಲ್ಲಿ ತನಿಖೆ ಮಾಡಿಲ್ಲ ಅದಕ್ಕಾಗಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಎನ್. ಆನಂದ್ ಕುಮಾರ್ ಹಾಗೂ ಜಿ. ಸಂತೋಷ್ ಕುಮಾರ್ ಎನ್ನುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಇಂದು ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪಿಠ ವಿಚಾರಣೆ ನಡೆಸಿ ತನಿಖೆ ಸೂಕ್ತ ರೀತಿಯಲ್ಲಿ ನಡೆದಿದೆಯೆ ಎಲ್ಲವೆ ನ್ನುವುದನ್ನು ಪರಿಶೀಲಿಸಲು ಹಿರಿಯ ಐಪಿಎಸ್ ಅಧಿಕಾರಿಯೊಬ್ಬರನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ನೇಮಕ ಮಾಡಬೇಕು. ಅವರು ಪರಿಶೀಲನೆ ನಡೆಸಿ ಡಿಸೆಂಬರ್ 15ರೊಳಗೆ ಮುಚ್ಚಿದ ಲಕೋಟೆಯಲ್ಲಿಕೋರ್ಟ್ ಗೆ ವರದಿ ನೀಡಬೇಕು ಎಂದು ಆದೇಶಿಸಿದೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಡಿಸೆಂಬರ್ 18ಕ್ಕೆ ನಿಗದಿ ಮಾಡಲಾಗಿದೆ.

ಮುನಿರತ್ನ ಅವರು ರಾಜರಾಜೇಶ್ವರಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ನಿಂದ ಸ್ಪರ್ಧಿಸಿ ಐವತ್ತು ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ರಾಜ್ಯದಲ್ಲಿ ನಡೆದ ಎರಡು ಕ್ಷೇತ್ರಗಳಾದ ಶಿರಾ ಹಾಗೂ ರಾಜರಾಜೇಶ್ವರಿ ನಗರದ ಉಪಚುನಾವಣೆ ಫಲಿತಾಂಶ ನಿನ್ನೆ (ಮಂಗಳವಾರ) ಘೋಷಣೆಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕರ್ನಾಟಕದ ಮುಕುಟಕ್ಕೆ ಮತ್ತೊಂದು ಗರಿ: ಬೆಂಗಳೂರು ಮೂಲದ ಮೇಜರ್ Swathi ShanthaKumarಗೆ ವಿಶ್ವಸಂಸ್ಥೆ ಸೆಕ್ರೆಟರಿ ಜನರಲ್ ಪ್ರಶಸ್ತಿ!

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

SCROLL FOR NEXT