ಟೊಯೋಟಾ 
ರಾಜ್ಯ

ಕಾರ್ಮಿಕರ ದಿಢೀರ್ ಪ್ರತಿಭಟನೆ: ಟೊಯೋಟಾ ಮೋಟಾರ್ಸ್ ಬಿಡದಿ ತಯಾರಿಕಾ ಘಟಕ ಲಾಕೌಟ್!

ಕಾರ್ಮಿಕ ಸಂಘದ ಪದಾಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಿದ್ದನ್ನು ಖಂಡಿಸಿ ಸಾವಿರಾರು ಕಾರ್ಮಿಕರು ದಿಢೀರ್ ಪ್ರತಿಭಟನೆಗಿಳಿದ ಬಳಿಕ ಬಿಡದಿಯ ಕೈಗಾರಿಗಾ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿ (ಟಿಕೆಎಂ)ಯನ್ನು ಅನಿರ್ದಿಷ್ಟಾವಧಿವರೆಗೂ ಲಾಕೌಟ್ ಮಾಡಲಾಗಿದೆ. 

ಬೆಂಗಳೂರು: ಕಾರ್ಮಿಕ ಸಂಘದ ಪದಾಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಿದ್ದನ್ನು ಖಂಡಿಸಿ ಸಾವಿರಾರು ಕಾರ್ಮಿಕರು ದಿಢೀರ್ ಪ್ರತಿಭಟನೆಗಿಳಿದ ಬಳಿಕ ಬಿಡದಿಯ ಕೈಗಾರಿಗಾ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿ (ಟಿಕೆಎಂ)ಯನ್ನು ಅನಿರ್ದಿಷ್ಟಾವಧಿವರೆಗೂ ಲಾಕೌಟ್ ಮಾಡಲಾಗಿದೆ. 

ಕಾರ್ಮಿಕರು ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ ಏಕಾಏಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ನೌಕರರ ಸುರಕ್ಷತಾ ದೃಷ್ಟಿಯಿಂದ ಅನಿರ್ದಿಷ್ಟಾವಧಿವರೆಗೂ ಕಾರ್ಖಾನೆಯನ್ನು ಲಾಕೌಟ್ ಮಾಡಲಾಗಿದೆ. ಪ್ರತಿಭಟನೆ ಹಿಂಪಡೆಯುವ ಸಂಬಂಧ ಕಾರ್ಮಿಕರ ಸಂಘಟನೆ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಕಂಪನಿಯು ಅಧಿಕೃತ ಹೇಳಿಕೆ ನೀಡಿದೆ. 

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ತನ್ನ ನೌಕರರು ಸೇರಿದಂತೆ ಎಲ್ಲಾ ಪಾಲುದಾರರ ಯೋಗಕ್ಷೇಮ ಕಾಯಲು ಬದ್ಧವಾಗಿದೆ. ಸೌಹಾರ್ದಯುತ ಮತ್ತು ಆರೋಗ್ಯಕರ ಕೆಲಸದ ವಾತಾವರಣವನ್ನು ಕಾಪಾಡಿಕೊಳ್ಳುವ ನಮ್ಮ ಪ್ರಯತ್ನದ ನಡುವೆ ಕೆಲವರು, ಶಿಸ್ತು ಉಲ್ಲಂಘಿಸುವ ಜೊತೆಗೆ ಅನುಚಿತವಾಗಿ ವರ್ತಿಸಿದ್ದಾರೆ. ಇಂತಹವನ್ನು ಕಂಪನಿಯ ಕಾನೂನು ಮತ್ತು ಸೇವಾ ನಿಯಮದಂತೆ ಅಮಾನತುಗೊಳಿಸಿ ವಿಚಾರಣೆಯಲ್ಲಿ ಇರಿಸಲಾಗಿದೆ ಎಂದು ಮಾಹಿತಿ ನೀಡಿದೆ. 

ಪ್ರಸ್ತುತ ಟಿಕೆಎಂ ಯೂನಿಯನ್ ಅಕ್ರಮವಾಗಿ ಮುಷ್ಕರವನ್ನು ನಡೆಸುತ್ತಿದ್ದು, ಗುಂಪು ಸೇರುವ ಮೂಲಕ ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಕಾರ್ಖಾನೆಯ ಆವರಣದಲ್ಲಿ ಉಳಿದಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ನೌಕರರ ಸುರಕ್ಷತೆ ದೃಷ್ಟಿಯಿಂದ ಕಂಪನಿಯ ಮುಂದಿನ ಆದೇಶ ಬರುವವರೆಗೂ ಬಿಡದಿ ಘಟಕದಲ್ಲಿ ಲಾಕೌಟ್ ಘೋಷಿಸಲಾಗಿದೆ. ಸಮಸ್ಯೆ ಕುರಿತು ಯೂನಿಯನ್ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ ಎಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT