ಟೊಯೋಟಾ 
ರಾಜ್ಯ

ಕಾರ್ಮಿಕರ ದಿಢೀರ್ ಪ್ರತಿಭಟನೆ: ಟೊಯೋಟಾ ಮೋಟಾರ್ಸ್ ಬಿಡದಿ ತಯಾರಿಕಾ ಘಟಕ ಲಾಕೌಟ್!

ಕಾರ್ಮಿಕ ಸಂಘದ ಪದಾಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಿದ್ದನ್ನು ಖಂಡಿಸಿ ಸಾವಿರಾರು ಕಾರ್ಮಿಕರು ದಿಢೀರ್ ಪ್ರತಿಭಟನೆಗಿಳಿದ ಬಳಿಕ ಬಿಡದಿಯ ಕೈಗಾರಿಗಾ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿ (ಟಿಕೆಎಂ)ಯನ್ನು ಅನಿರ್ದಿಷ್ಟಾವಧಿವರೆಗೂ ಲಾಕೌಟ್ ಮಾಡಲಾಗಿದೆ. 

ಬೆಂಗಳೂರು: ಕಾರ್ಮಿಕ ಸಂಘದ ಪದಾಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಿದ್ದನ್ನು ಖಂಡಿಸಿ ಸಾವಿರಾರು ಕಾರ್ಮಿಕರು ದಿಢೀರ್ ಪ್ರತಿಭಟನೆಗಿಳಿದ ಬಳಿಕ ಬಿಡದಿಯ ಕೈಗಾರಿಗಾ ಪ್ರದೇಶದಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿ (ಟಿಕೆಎಂ)ಯನ್ನು ಅನಿರ್ದಿಷ್ಟಾವಧಿವರೆಗೂ ಲಾಕೌಟ್ ಮಾಡಲಾಗಿದೆ. 

ಕಾರ್ಮಿಕರು ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿ ಏಕಾಏಕಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ನೌಕರರ ಸುರಕ್ಷತಾ ದೃಷ್ಟಿಯಿಂದ ಅನಿರ್ದಿಷ್ಟಾವಧಿವರೆಗೂ ಕಾರ್ಖಾನೆಯನ್ನು ಲಾಕೌಟ್ ಮಾಡಲಾಗಿದೆ. ಪ್ರತಿಭಟನೆ ಹಿಂಪಡೆಯುವ ಸಂಬಂಧ ಕಾರ್ಮಿಕರ ಸಂಘಟನೆ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಕಂಪನಿಯು ಅಧಿಕೃತ ಹೇಳಿಕೆ ನೀಡಿದೆ. 

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ತನ್ನ ನೌಕರರು ಸೇರಿದಂತೆ ಎಲ್ಲಾ ಪಾಲುದಾರರ ಯೋಗಕ್ಷೇಮ ಕಾಯಲು ಬದ್ಧವಾಗಿದೆ. ಸೌಹಾರ್ದಯುತ ಮತ್ತು ಆರೋಗ್ಯಕರ ಕೆಲಸದ ವಾತಾವರಣವನ್ನು ಕಾಪಾಡಿಕೊಳ್ಳುವ ನಮ್ಮ ಪ್ರಯತ್ನದ ನಡುವೆ ಕೆಲವರು, ಶಿಸ್ತು ಉಲ್ಲಂಘಿಸುವ ಜೊತೆಗೆ ಅನುಚಿತವಾಗಿ ವರ್ತಿಸಿದ್ದಾರೆ. ಇಂತಹವನ್ನು ಕಂಪನಿಯ ಕಾನೂನು ಮತ್ತು ಸೇವಾ ನಿಯಮದಂತೆ ಅಮಾನತುಗೊಳಿಸಿ ವಿಚಾರಣೆಯಲ್ಲಿ ಇರಿಸಲಾಗಿದೆ ಎಂದು ಮಾಹಿತಿ ನೀಡಿದೆ. 

ಪ್ರಸ್ತುತ ಟಿಕೆಎಂ ಯೂನಿಯನ್ ಅಕ್ರಮವಾಗಿ ಮುಷ್ಕರವನ್ನು ನಡೆಸುತ್ತಿದ್ದು, ಗುಂಪು ಸೇರುವ ಮೂಲಕ ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕಾನೂನು ಬಾಹಿರವಾಗಿ ಕಾರ್ಖಾನೆಯ ಆವರಣದಲ್ಲಿ ಉಳಿದಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ನೌಕರರ ಸುರಕ್ಷತೆ ದೃಷ್ಟಿಯಿಂದ ಕಂಪನಿಯ ಮುಂದಿನ ಆದೇಶ ಬರುವವರೆಗೂ ಬಿಡದಿ ಘಟಕದಲ್ಲಿ ಲಾಕೌಟ್ ಘೋಷಿಸಲಾಗಿದೆ. ಸಮಸ್ಯೆ ಕುರಿತು ಯೂನಿಯನ್ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ ಎಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT