ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನ ಹೊಸಗುಡ್ಡದಹಳ್ಳಿ ಬೆಂಕಿ ಅವಘಡ: ಇಬ್ಬರ ಬಂಧನ

ಬೆಂಗಳೂರಿನ ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿಯ ಬಾಪೂಜಿನಗರದಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ್ದ ಬೆಂಕಿ ಅವಘಡ ಸಂಬಂಧ, ಕಾರ್ಖಾನೆ ಮಾಲೀಕ ಸಜ್ಜನ್ ರಾವ್ ಹಾಗೂ ಕಂಪನಿ ಉದ್ಯೋಗಿ ಅನಿಲ್ ಎಂಬುವರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿಯ ಬಾಪೂಜಿನಗರದಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ್ದ ಬೆಂಕಿ ಅವಘಡ ಸಂಬಂಧ, ಕಾರ್ಖಾನೆ ಮಾಲೀಕ ಸಜ್ಜನ್ ರಾವ್ ಹಾಗೂ ಕಂಪನಿ ಉದ್ಯೋಗಿ ಅನಿಲ್ ಎಂಬುವರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸ್ಪೋಟಕ ವಸ್ತುಗಳ ಕಾಯ್ದೆಯಡಿ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

ಘಟನೆ ನಂತರ ತಲೆಮರೆಸಿಕೊಂಡಿದ್ದ ಸಜ್ಜನ್ ರಾವ್ ಹಾಗೂ ಅನಿಲ್‌ ಅವರನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಅವರು ತಿಳಿಸಿದ್ದಾರೆ.

ನಿನ್ನೆ ಬೆಳಗ್ಗೆ ಗೋಡೌನ್ ನಲ್ಲಿ ಸಣ್ಣ ಪ್ರಮಾಣದಲ್ಲಿ ಕಾಣಿಸಿಕೊಂಡ ಬೆಂಕಿಯು ಭಾರೀ ಪ್ರಮಾಣದಲ್ಲಿ ಹರಡಿ ಆತಂಕ ಸೃಷ್ಟಿಯಾದ ಬೆನ್ನಲ್ಲೇ ಅಕ್ಕಪಕ್ಕದ ಮನೆಯವರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ಕಾರ್ಖಾನೆಯಲ್ಲಿದ್ದ ನಾಲ್ವರು ಹೊರಗೆ ಓಡಿ ಬಂದು ಪ್ರಾಣ ಉಳಿಸಿಕೊಂಡಿದ್ದಾರೆ. ಬೆಂಕಿಯು ಬೃಹತ್ ಪ್ರಮಾಣದಲ್ಲಿ ಹರಡಿ ಅಕ್ಕಪಕ್ಕದ ಮನೆಗಳಿಗೆ ಆವರಿಸ ತೊಡಗಿತ್ತು. ಸುದ್ದಿ ತಿಳಿದ ತಕ್ಷಣವೇ ಅಗ್ನಿಶಾಮಕ ವಾಹನಗಳು ಧಾವಿಸಿ ಕಾರ್ಯಚರಣೆ ಕೈಗೊಂಡು ಬೆಂಕಿ ನಿಯಂತ್ರಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಧ್ಯಪ್ರಾಚ್ಯ ಸಂಘರ್ಷ ಕೊನೆಗೂ ಅಂತ್ಯ: Pak ಮಧ್ಯಸ್ಥಿಕೆಯಲ್ಲಿ US-Iran ನಡುವೆ ಶಾಂತಿ ಒಪ್ಪಂದ; ನೌಕಾ ದಿಗ್ಬಂಧನ ತೆರವು, ತಕ್ಷಣದಿಂದಲೇ Hormuz ಜಲಸಂಧಿ ಓಪನ್‌..!

ಇದು ಅಂತಿಮ ಒಪ್ಪಂದವಲ್ಲ, ದುರ್ವರ್ತನೆ ತೋರಿದರೆ ಯುದ್ಧ ಪುನರಾರಂಭ: ಇರಾನ್‌ಗೆ ಟ್ರಂಪ್ ಖಡಕ್ ಎಚ್ಚರಿಕೆ

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್- ಜೆಡಿಎಸ್ ಪೈಪೋಟಿ -ಅಡ್ಡ ಮತದಾನದ ಭೀತಿ! 7ನೇ ಸ್ಥಾನ ಗೆಲ್ಲೋರು ಯಾರು?

ದೆಹಲಿಯಲ್ಲಿ ಡಿ.ಕೆ.ಶಿವಕುಮಾರ್ Power game: ವೈಯಕ್ತಿಕ ಪ್ರತಿನಿಧಿಯಾಗಿ ಜೋಬಿನ್ ಜೋಸೆಫ್ ನೇಮಕ, ಹಿಂದಿನ ರಾಜಕೀಯ ಲೆಕ್ಕಾಚಾರವೇನು..?

ಗೃಹಲಕ್ಷ್ಮಿ ದುರುಪಯೋಗಕ್ಕೆ ಬ್ರೇಕ್; ಅರ್ಜಿ ನಮೂನೆಯಲ್ಲಿ ಸರ್ಕಾರ ಮಹತ್ವದ ಬದಲಾವಣೆ, Voter ID, Aadhaar-Link ಮಾಹಿತಿ ಕಡ್ಡಾಯ ಸಾಧ್ಯತೆ..!

SCROLL FOR NEXT