ಉಪ ಮುಖ್ಯಮಂತ್ರಿ ಡಾ.ಸಿ. ಎನ್.ಅಶ್ವತ್ ನಾರಾಯಣ 
ರಾಜ್ಯ

ರಾಜ್ಯದ ನೂತನ ಐಟಿ-ಬಿಟಿ ನೀತಿ ಬಿಡುಗಡೆ ಮಾಡಿದ ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರಿನಲ್ಲಿ ಆಯೋಜಿಸುತ್ತಿರುವ ಟೆಕ್ ಸಮಿಟ್ - 2020 ಹಿನ್ನೆಲೆಯಲ್ಲಿ ನೂತನ ಐಟಿ-ಬಿಟಿ ನೀತಿಯನ್ನು ರಾಜ್ಯ ಸರ್ಕಾರ ಗುರುವಾರ ಬಿಡುಗಡೆ ಮಾಡಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ಆಯೋಜಿಸುತ್ತಿರುವ ಟೆಕ್ ಸಮಿಟ್ - 2020 ಹಿನ್ನೆಲೆಯಲ್ಲಿ ನೂತನ ಐಟಿ-ಬಿಟಿ ನೀತಿಯನ್ನು ರಾಜ್ಯ ಸರ್ಕಾರ ಗುರುವಾರ ಬಿಡುಗಡೆ ಮಾಡಿದೆ.

ಇಂದು ನೂತನ ಐಟಿ-ಬಿಟಿ ನೀತಿ ಬಿಡುಗಡೆ ಮಾಡಿ ಮಾತನಾಡಿದ ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಅವರು, ರಾಜ್ಯದ ಎರಡು ಮತ್ತು ಮೂರನೇ ಹಂತದ ನಗರಗಳಲ್ಲಿ ಐಟಿ-ಬಿಟಿ ಸಂಸ್ಥೆಗಳನ್ನು ಸ್ಥಾಪಿಸಲು ಸರ್ಕಾರ ಆದ್ಯತೆ ನೀಡಿದ್ದು, ನೂತನ ನೀತಿ ಇದಕ್ಕೆ ಪೂರಕವಾಗಿದೆ ಎಂದರು.

ಬೆಂಗಳೂರಿನಲ್ಲಿ ಟೆಕ್ ಸಮ್ಮಿಟ್ ಆರಂಭಿಸುತ್ತಿದ್ದು, ಈ ಸಮ್ಮೇಳನದ ಯಶಸ್ಸಿಗೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುವುದು. ರಾಜ್ಯದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ನೀಲನಕ್ಷೆ ಸಿದ್ಧಪಡಿಸಲಾಗುತ್ತಿದೆ. ನಗರಗಳಲ್ಲಿ ಪರಿಸರ ಸ್ನೇಹಿ ತಂತ್ರಜ್ಞಾನ ಅಳವಡಿಕೆ ಜೊತೆಗೆ ಬಂಡವಾಳ ಆಕರ್ಷಣೆಗೂ ಆದ್ಯತೆ ನೀಡಲಾಗುವುದು ಎಂದರು.

ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿನ ಬೆಳವಣಿಗೆಗಳ ಕುರಿತು ಸರ್ಕಾರ ಶ್ವೇತಪತ್ರ ಹೊರಡಿಸಿ, ಸಮಸ್ಯೆಗಳಿಗೆ ಪರಿಹಾರ ರೂಪಿಸುವ ನಿಟ್ಟಿನಲ್ಲಿ ಕಾರ್ಯ ಯೋಜನೆಯನ್ನು ಸಿದ್ಧಪಡಿಸಲಿದೆ., ಮುಂದಿನ 5 ವರ್ಷಗಳಲ್ಲಿ ರಾಜ್ಯದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಯನ್ನು 300 ಶತಕೋಟಿ ಡಾಲರ್ ಗೆ ಏರಿಸುವ ಗುರಿ ಹೊಂದಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT