ಸಾಂದರ್ಭಿಕ ಚಿತ್ರ 
ರಾಜ್ಯ

ನಿಲ್ಲದ ಚಿರತೆ ಹಾವಳಿ: ಭಯದಿಂದ ಆನೆಗೊಂದಿ ಪ್ರವಾಸ ಸ್ಥಳಗಳಿಗೆ ನಿಷೇಧ

 ಕಳೆದ ಎರಡು ವಾರಗಳಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಯಲ್ಲಿ ಚಿರತೆ ಹಾವಳಿ ಹೆಚ್ಚಾದ ಕಾರಣ ಈ ಪ್ರದೇಶದಲ್ಲಿರುವ ಪ್ರವಾಸ ಸ್ಥಳಗಳಿಗೆ ನಿಷೇಧ ಹೇರಲಾಗಿದೆ.

ಕೊಪ್ಪಳ:  ಕಳೆದ ಎರಡು ವಾರಗಳಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಯಲ್ಲಿ ಚಿರತೆ ಹಾವಳಿ ಹೆಚ್ಚಾದ ಕಾರಣ ಈ ಪ್ರದೇಶದಲ್ಲಿರುವ ಪ್ರವಾಸ ಸ್ಥಳಗಳಿಗೆ ನಿಷೇಧ ಹೇರಲಾಗಿದೆ.

ವಿಜಯನಗರ ಸಾಮ್ರಾಜ್ಯ ಕಾಲದ ಪ್ರಸಿದ್ಧ  ಅಂಜನಾದ್ರಿ ಬೆಟ್ಟದ ಮೇಲಿರುವ ಆಂಜನೇಯ ದೇವಾಲಯವಿದೆ, ಇದು ಹನುಮಂತನ ಜನ್ಮ ಸ್ಥಳ ಎಂದೇ ನಂಬಿಕೆ ಮನೆ ಮಾಡಿದೆ.  ಆನೆಗೊಂದಿ ಬೆಟ್ಟದ ತಪ್ಪಲುಗಳಿಂದ ಸುತ್ತುವರಿದಿದ್ದು, ತುಂಗಭದ್ರಾ ನದಿ, ಪಂಪ ಸರೋವರ, ಸನಾಪುರ ಕೆರೆ, ದುರ್ಗಾದೇವಿ ದೇವಾಲಯ ಸೇರಿದಂತೆ ಹಲವು ಪ್ರವಾಸಿ ಸ್ಥಳಗಳಿವೆ. 

ಬೆಟ್ಟದ ಮೇಲಿರುವ ಆಂಜನೇಯ ದೇವಾಲಯಕ್ಕೆ ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ. ಆದರೆ ಲಾಕ್ ಡೌನ್ ಕಾರಣದಿಂದ ಬಂದ್ ಆಗಿತ್ತು, ಆದರೆ ಲಾಕ್ ಡೌನ್ ತೆರವಿನ ನಂತರ ಭಕ್ತರು ಅಪಾರ ಪ್ರಮಾಣದಲ್ಲಿ ಆಗಮಿಸಲು ಆರಂಭಿಸಿದ್ದಾರೆ. 

ಆನೆಗೊಂದಿ ಬೆಟ್ಟಗುಡ್ಡಗಳ ಪ್ರದೇಶದಲ್ಲಿ ಚಿರತೆ ದಾಳಿ ಮುಂದುವರಿದಿದ್ದು, ಅರಣ್ಯ ಇಲಾಖೆಯವರು ಬೋನ್‌ ಅಳವಡಿಸಿದರೂ ಚಿರತೆ ಸೆರೆ ಸಿಗದೆ ಸಿಬ್ಬಂದಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದೆ. ವಾರದ ಹಿಂದೆ ತಾಲೂಕಿನ ಆನೆಗೊಂದಿಯ ದುರ್ಗಾ ಬೆಟ್ಟದಲ್ಲಿ ದುರ್ಗಾ ದೇವಸ್ಥಾನದ ಅಡುಗೆಯವನ ಮೇಲೆ ದಾಳಿ ನಡೆಸಿ ಬಲಿ ತೆಗೆದುಕೊಂಡ ಘಟನೆ ಮಾಸುವ ಮುನ್ನವೆ ಮತ್ತೇ ವಿರೂಪಾಪುರ ಗಡ್ಡೆ ಬಳಿ ದನಕರುಗಳ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ. 

ಆನೆಗೊಂದಿಯ ಬೆಟ್ಟಗುಡ್ಡಗಳು ಮತ್ತು ಭತ್ತದ ಗದ್ದೆಗಳಲ್ಲಿ ವಾಸವಾಗಿರುವ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯವರು 7 ಬೋನ್‌ಗಳನ್ನು ಅಳವಡಿಸಿದ್ದಾರೆ. ಚಿರತೆ ಚಲನವಲನಗಳನ್ನು ಗುರುತಿಸಿರುವ ಇಲಾಖೆ ದುರ್ಗಾ ಬೆಟ್ಟದ ಬಳಿ 3 ಬೋನ್‌ಗಳು, ತಳವಾರ ಘಟ್ಟ 1, ಸುದರ್ಶನ ವರ್ಮ ಎನ್ನುವವರ ತೋಟದ ಬಳಿ 1, ಕರಿಯಮ್ಮನ ಗಡ್ಡಿ ಬಳಿ 1, ಬೆಂಚಕುಟ್ರಿ ಎನ್ನುವ ಪ್ರದೇಶಗಳಲ್ಲಿ 1 ಬೋನ್‌ ಅಳವಡಿಸಿದೆ ಎಂದು  ಕೊಪ್ಪಳ ಡಿಸಿಎಫ್ ಹರ್ಷಭಾನು ತಿಳಿಸಿದ್ದಾರೆ. ಆದರೆ ಚಿರತೆಗಳು ಸಾಮಾನ್ಯವಾಗಿ ಅವರು ಈಗಾಗಲೇ ದಾಳಿ ಮಾಡಿದ ಸ್ಥಳಗಳಿಗೆ ಭೇಟಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT