ಸಾಂದರ್ಭಿಕ ಚಿತ್ರ 
ರಾಜ್ಯ

ನಿಲ್ಲದ ಚಿರತೆ ಹಾವಳಿ: ಭಯದಿಂದ ಆನೆಗೊಂದಿ ಪ್ರವಾಸ ಸ್ಥಳಗಳಿಗೆ ನಿಷೇಧ

 ಕಳೆದ ಎರಡು ವಾರಗಳಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಯಲ್ಲಿ ಚಿರತೆ ಹಾವಳಿ ಹೆಚ್ಚಾದ ಕಾರಣ ಈ ಪ್ರದೇಶದಲ್ಲಿರುವ ಪ್ರವಾಸ ಸ್ಥಳಗಳಿಗೆ ನಿಷೇಧ ಹೇರಲಾಗಿದೆ.

ಕೊಪ್ಪಳ:  ಕಳೆದ ಎರಡು ವಾರಗಳಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಯಲ್ಲಿ ಚಿರತೆ ಹಾವಳಿ ಹೆಚ್ಚಾದ ಕಾರಣ ಈ ಪ್ರದೇಶದಲ್ಲಿರುವ ಪ್ರವಾಸ ಸ್ಥಳಗಳಿಗೆ ನಿಷೇಧ ಹೇರಲಾಗಿದೆ.

ವಿಜಯನಗರ ಸಾಮ್ರಾಜ್ಯ ಕಾಲದ ಪ್ರಸಿದ್ಧ  ಅಂಜನಾದ್ರಿ ಬೆಟ್ಟದ ಮೇಲಿರುವ ಆಂಜನೇಯ ದೇವಾಲಯವಿದೆ, ಇದು ಹನುಮಂತನ ಜನ್ಮ ಸ್ಥಳ ಎಂದೇ ನಂಬಿಕೆ ಮನೆ ಮಾಡಿದೆ.  ಆನೆಗೊಂದಿ ಬೆಟ್ಟದ ತಪ್ಪಲುಗಳಿಂದ ಸುತ್ತುವರಿದಿದ್ದು, ತುಂಗಭದ್ರಾ ನದಿ, ಪಂಪ ಸರೋವರ, ಸನಾಪುರ ಕೆರೆ, ದುರ್ಗಾದೇವಿ ದೇವಾಲಯ ಸೇರಿದಂತೆ ಹಲವು ಪ್ರವಾಸಿ ಸ್ಥಳಗಳಿವೆ. 

ಬೆಟ್ಟದ ಮೇಲಿರುವ ಆಂಜನೇಯ ದೇವಾಲಯಕ್ಕೆ ದೇಶದ ವಿವಿಧ ಭಾಗಗಳಿಂದ ಭಕ್ತರು ಆಗಮಿಸುತ್ತಾರೆ. ಆದರೆ ಲಾಕ್ ಡೌನ್ ಕಾರಣದಿಂದ ಬಂದ್ ಆಗಿತ್ತು, ಆದರೆ ಲಾಕ್ ಡೌನ್ ತೆರವಿನ ನಂತರ ಭಕ್ತರು ಅಪಾರ ಪ್ರಮಾಣದಲ್ಲಿ ಆಗಮಿಸಲು ಆರಂಭಿಸಿದ್ದಾರೆ. 

ಆನೆಗೊಂದಿ ಬೆಟ್ಟಗುಡ್ಡಗಳ ಪ್ರದೇಶದಲ್ಲಿ ಚಿರತೆ ದಾಳಿ ಮುಂದುವರಿದಿದ್ದು, ಅರಣ್ಯ ಇಲಾಖೆಯವರು ಬೋನ್‌ ಅಳವಡಿಸಿದರೂ ಚಿರತೆ ಸೆರೆ ಸಿಗದೆ ಸಿಬ್ಬಂದಿಗೆ ಚಳ್ಳೆ ಹಣ್ಣು ತಿನ್ನಿಸುತ್ತಿದೆ. ವಾರದ ಹಿಂದೆ ತಾಲೂಕಿನ ಆನೆಗೊಂದಿಯ ದುರ್ಗಾ ಬೆಟ್ಟದಲ್ಲಿ ದುರ್ಗಾ ದೇವಸ್ಥಾನದ ಅಡುಗೆಯವನ ಮೇಲೆ ದಾಳಿ ನಡೆಸಿ ಬಲಿ ತೆಗೆದುಕೊಂಡ ಘಟನೆ ಮಾಸುವ ಮುನ್ನವೆ ಮತ್ತೇ ವಿರೂಪಾಪುರ ಗಡ್ಡೆ ಬಳಿ ದನಕರುಗಳ ಮೇಲೆ ದಾಳಿ ನಡೆಸಿ ಗಾಯಗೊಳಿಸಿದೆ. 

ಆನೆಗೊಂದಿಯ ಬೆಟ್ಟಗುಡ್ಡಗಳು ಮತ್ತು ಭತ್ತದ ಗದ್ದೆಗಳಲ್ಲಿ ವಾಸವಾಗಿರುವ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯವರು 7 ಬೋನ್‌ಗಳನ್ನು ಅಳವಡಿಸಿದ್ದಾರೆ. ಚಿರತೆ ಚಲನವಲನಗಳನ್ನು ಗುರುತಿಸಿರುವ ಇಲಾಖೆ ದುರ್ಗಾ ಬೆಟ್ಟದ ಬಳಿ 3 ಬೋನ್‌ಗಳು, ತಳವಾರ ಘಟ್ಟ 1, ಸುದರ್ಶನ ವರ್ಮ ಎನ್ನುವವರ ತೋಟದ ಬಳಿ 1, ಕರಿಯಮ್ಮನ ಗಡ್ಡಿ ಬಳಿ 1, ಬೆಂಚಕುಟ್ರಿ ಎನ್ನುವ ಪ್ರದೇಶಗಳಲ್ಲಿ 1 ಬೋನ್‌ ಅಳವಡಿಸಿದೆ ಎಂದು  ಕೊಪ್ಪಳ ಡಿಸಿಎಫ್ ಹರ್ಷಭಾನು ತಿಳಿಸಿದ್ದಾರೆ. ಆದರೆ ಚಿರತೆಗಳು ಸಾಮಾನ್ಯವಾಗಿ ಅವರು ಈಗಾಗಲೇ ದಾಳಿ ಮಾಡಿದ ಸ್ಥಳಗಳಿಗೆ ಭೇಟಿ ನೀಡುವುದಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT