ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ 
ರಾಜ್ಯ

ರಾಜ್ಯದಲ್ಲಿ 24 ಗಂಟೆಯೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯನಿರ್ವಹಣೆ- ಸಚಿವ ಡಾ. ಕೆ. ಸುಧಾಕರ್ 

ಪ್ರಾಥಮಿಕ ಆರೋಗ್ಯ ಕೇಂದ್ರಗಳು 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡುವ ಜೊತೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಪೂರಕವಾಗಿ ನೀತಿ, ನಿಯಮಗಳಲ್ಲಿ ಬದಲಾವಣೆ ತರಲಾಗುವುದು ಎಂದು ಆರೋಗ್ಯ, ವೈದ್ಯಕೀಯ ಮತ್ತು ವೈದ್ಯಕೀಯ  ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. 

ಬೆಂಗಳೂರು: ಪ್ರಾಥಮಿಕ ಆರೋಗ್ಯ ಕೇಂದ್ರಗಳು 24 ಗಂಟೆಯೂ ಕಾರ್ಯನಿರ್ವಹಿಸುವಂತೆ ಮಾಡುವ ಜೊತೆಗೆ ವಿಶ್ವಬ್ಯಾಂಕ್ ನೆರವಿನೊಂದಿಗೆ ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಪೂರಕವಾಗಿ ನೀತಿ, ನಿಯಮಗಳಲ್ಲಿ ಬದಲಾವಣೆ ತರಲಾಗುವುದು ಎಂದು ಆರೋಗ್ಯ, ವೈದ್ಯಕೀಯ ಮತ್ತು ವೈದ್ಯಕೀಯ  ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. 

ವಿಧಾನಸೌಧದಲ್ಲಿ ಮಾಜಿ ಆರೋಗ್ಯ ಸಚಿವರು,ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಹಾಗೂ ವೈದ್ಯ ಶಾಸಕರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 2,300 ಕ್ಕೂ ಅಧಿಕ ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. 30 ಸಾವಿರ ಜನರಿಗೆ ಒಂದು ಪ್ರಾಥಮಿಕ ಆರೋಗ್ಯ ಕೇಂದ್ರ ಇರಬೇಕೆಂಬ ನಿಯಮವಿದೆ. ಆದರೆ ಕೆಲ ಜಿಲ್ಲೆಗಳಲ್ಲಿ ಈ ನಿಯಮದಂತೆ ಆಸ್ಪತ್ರೆ ಇಲ್ಲ. ವಿಶ್ವಬ್ಯಾಂಕ್ ಸಹಕಾರದಿಂದ ಮೂರು ವರ್ಷಗಳಲ್ಲಿ ಇವುಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು, ಜೊತೆಗೆ ಈಗ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 24 ಗಂಟೆಯೂ ಸೇವೆ ದೊರೆಯುವ ಕೇಂದ್ರಗಳಾಗಿ ಪರಿವರ್ತಿಸಲಾಗುವುದು ಎಂದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಆರಂಭವಾಗಿ ದೊಡ್ಡ ಆಸ್ಪತ್ರೆಗಳವರೆಗೂ ಗುಣಮಟ್ಟದಲ್ಲಿ ರಾಜಿಯಾಗದಂತೆ ಕ್ರಮ ಕೈಗೊಳ್ಳಬೇಕಿದೆ. ಇದಕ್ಕಾಗಿ ಸಮಗ್ರವಾದ ಹೊಸ ನೀತಿಯನ್ನು ರೂಪಿಸಲಾಗುತ್ತಿದೆ.ಕೆಲ ವೈದ್ಯರು ಗ್ರಾಮೀಣ ಪ್ರದೇಶಗಳಿಗೆ ಸೇವೆ ಸಲ್ಲಿಸಲು ಹಿಂದೇಟು ಹಾಕುತ್ತಾರೆ. ಆರೋಗ್ಯ ಸಿಬ್ಬಂದಿ ಸೇವೆ ಸಲ್ಲಿಸುವ ಪ್ರದೇಶದ ಆಧಾರದಲ್ಲಿ ಬಡ್ತಿ, ವೇತನ, ಮಕ್ಕಳಿಗೆ ಶಿಕ್ಷಣ ನೀಡುವ ಅಂಶಗಳನ್ನು ಈ ಹೊಸ ನೀತಿಯಲ್ಲಿ ಸೇರಿಸಲಾಗುವುದು ಎಂದು ವಿವರಿಸಿದರು.

1,250 ಎಂಬಿಬಿಎಸ್ ವೈದ್ಯರು, 950 ತಜ್ಞರು, 150 ದಂತ ವೈದ್ಯರು ಸೇರಿ 2,500 ವೈದ್ಯರ ನೇಮಕ ಪ್ರಕ್ರಿಯೆ ಆರಂಭವಾಗಿದೆ. ಜೊತೆಗೆ 1,500 ಹಿರಿಯ ರೆಸಿಡೆಂಟ್ ವೈದ್ಯರನ್ನು ನೇಮಿಸಲಾಗುವುದು. ಡಿಸೆಂಬರ್  ಅಥವಾ ಜನವರಿ ವೇಳೆಗೆ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಜಿಲ್ಲಾಸ್ಪತ್ರೆಗಳಲ್ಲಿ ಹುದ್ದೆಗಳು ಭರ್ತಿಯಾಗಲಿದೆ. ಅರೆ ವೈದ್ಯಕೀಯ, ನರ್ಸಿಂಗ್ ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಇದನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗಮನಕ್ಕೆ ತರಲಾಗುವುದು ಎಂದರು.

ವೈದ್ಯಕೀಯ ಶಿಕ್ಷಣ ಇಲಾಖೆಯಿಂದ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸುವ ಉದ್ದೇಶವಿದ್ದು, ಅದಕ್ಕೆ ತಕ್ಕಂತೆ ನೀತಿಯಲ್ಲಿ ಬದಲಾವಣೆ ತರಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT