ಹೊಯ್ಸಳೇಶ್ವರ ದೇವಾಲಯ 
ರಾಜ್ಯ

ವಿದ್ಯುತ್ ಬಿಲ್ ಪಾವತಿಸದ್ದಕ್ಕೆ ಪವರ್ ಕಟ್: ಕತ್ತಲಲ್ಲಿ ಹಳೇಬೀಡಿನ ಹೊಯ್ಸಳೇಶ್ವರ ದೇವಾಲಯ

ಕೇಂದ್ರ ಪುರಾತತ್ವ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಳೇಬೀಡಿನ ಐತಿಹಾಸಿಕ ಹೊಯ್ಸಳೇಶ್ವರ ದೇವಾಲಯವು 10 ದಿನಗಳಿಂದ ಕಗ್ಗತ್ತಲಿನಲ್ಲಿ ಇರುವಂತಾಗಿದೆ. 

ಹಾಸನ: ಕೇಂದ್ರ ಪುರಾತತ್ವ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಳೇಬೀಡಿನ ಐತಿಹಾಸಿಕ ಹೊಯ್ಸಳೇಶ್ವರ ದೇವಾಲಯವು 10 ದಿನಗಳಿಂದ ಕಗ್ಗತ್ತಲಿನಲ್ಲಿ ಇರುವಂತಾಗಿದೆ. 

ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣ ಸೆಸ್ಕ ಸಿಬ್ಬಂದಿ ಸಂಪರ್ಕ ಕಡಿತಗೊಳಿಸಿದ್ದು 6 ತಿಂಗಳ ಬಾಕಿ ರೂ.45,000 ನ್ನು ಪುರಾತತ್ವ ವಿಭಾಗ ಪಾವತಿಸಬೇಕಿದೆ. ಪ್ರತಿನಿತ್ಯ ದೇವಗುಲಕ್ಕೆ ಭೇಟಿ ನೀಡುತ್ತಿರುವ ಪ್ರವಾಸಿಗರು ಹಾಗೂ ಭಕ್ತರು ಅಧಿಕಾರಿಗಳ ಉದಾಸೀನ ಮನೋಭಾವ ತಿಳಿದು ಬೇಸರ ವ್ಯಕ್ತಪಡಿಸುತ್ತಿದ್ದಾರೆ. 

ದೇವಾಲಯದ ಒಳಭಾಗದ ಶಿಲ್ಪಕಲೆಯನ್ನು ಸವಿಯಾಗದೆ ಭಕ್ತರು ನಿರಾಶೆಗೊಳ್ಳುತ್ತಿದ್ದಾರೆ. 3 ತಿಂಗಳ ಹಿಂದೆ ಇದೇ ಕಾರಣಕ್ಕೆ ದೇಗುಲದ ವಿದ್ಯುತ್ ಸಂಪರ್ಕವನ್ನು ಸೆಸ್ಕ ಸಿಬ್ಬಂದಿ ಕಡಿತಗೊಳಿಸಿದ್ದರು. ಬಾಕಿ ಪಾವತಿಸುವುದಾಗಿ ಹೇಳಿದ್ದ ಪುರಾತತ್ವ ವಿಭಾಗದ ಅಧಿಕಾರಿಗಳ ಭರವಸೆ ಮೇರೆಗೆ ಹಾಗೂ ಅರ್ಚಕರ ಮನವಿ ಆಲಿಸಿ ಪುನಃ ಸಂಪರ್ಕ ಕಲ್ಪಿಸಲಾಗಿತ್ತು. ಆದರೆ, ಅಂದಿನಿಂದಲೂ ಬಿಲ್ ಬಾಕಿ ಇದ್ದು, ಈಗ ಮೊತ್ತವೂ ಹೆಚ್ಚಾಗಿರುವ ಕಾರಣ ನಿಯಮಾನುಸಾರ ಸಂಪರ್ಕ ಕಡಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT