ಸಾಂದರ್ಭಿಕ ಚಿತ್ರ 
ರಾಜ್ಯ

ಮೂವರು ಮಕ್ಕಳಿಗೆ ನೇಣು ಬಿಗಿದು ತಂದೆಯೂ ಆತ್ಮಹತ್ಯೆ, ಬೆಂಗಳೂರಿನಲ್ಲಿ ಹೃದಯ ವಿದ್ರಾವಕ ಘಟನೆ

ಮೂವರು ಮಕ್ಕಳನ್ನು ನೇಣು ಬಿಗಿದು ಬಳಿಕ ತಂದೆಯೂ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ನಗರದ ಮೈಕೋ ಲೇಔಟ್ ನ ರಮಣಶ್ರೀ ಎನ್ ಕ್ಲೇವ್ ಬಳಿ ಶುಕ್ರವಾರ ನಡೆದಿದೆ.

ಬೆಂಗಳೂರು: ಮೂವರು ಮಕ್ಕಳನ್ನು ನೇಣು ಬಿಗಿದು ಬಳಿಕ ತಂದೆಯೂ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ನಗರದ ಮೈಕೋ ಲೇಔಟ್ ನ ರಮಣಶ್ರೀ ಎನ್ ಕ್ಲೇವ್ ಬಳಿ ಶುಕ್ರವಾರ ನಡೆದಿದೆ.

ಸರಸ್ವತಿ (14), ಹೇಮತಿ (11), ರಾಜ್ ಕುಮಾರ್ (3) ಮೃತ ಮಕ್ಕಳು. 32 ವರ್ಷದ ಜನಕರಾಜ್ ಬಿಸ್ತಾ ಎಂಬುವವರು ತಮ್ಮ ಮೂವರು ಮಕ್ಕಳನ್ನು ನೇಣು ಬಿಗಿದು ಬಳಿಕ ತಾವು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಮೃತ ಜನಕರಾಜ್ ಬಿಸ್ತಾ ಅವರು ರಮಣಶ್ರೀ ಎನ್ ಕ್ಲೇವ್ ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಎರಡು ತಿಂಗಳ ಹಿಂದಷ್ಟೇ ಜನಕರಾಜ್ ಅವರ ಪತ್ನಿ ನಂದಾದೇವಿ ಆತ್ಮಹತ್ಯೆಗೆ ಶರಣಾಗಿದ್ದರು. ಆದ್ದರಿಂದ ಮಕ್ಕಳನ್ನು ನೋಡಿಕೊಳ್ಳಲಾರದೇ ಜೀವನದಲ್ಲಿ ಜುಗುಪ್ಸೆಗೊಂಡು ಜನಕರಾಜ್ ತಮ್ಮ ಮಕ್ಕಳನ್ನು ನೇಣಿಗೆ ಹಾಕಿ ತಾವು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ, ನಾಲ್ವರ ಮೃತದೇಹಗಳನ್ನು ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT