ಸಂಗ್ರಹ ಚಿತ್ರ 
ರಾಜ್ಯ

ಹಿರಿಯ ಪರ್ತಕರ್ತ ರವಿ ಬೆಳಗೆರೆ ನಿಧನ: ಪ್ರಾರ್ಥನಾ ಶಾಲೆ ಅಂಗಳದಲ್ಲಿ ಮಡುಗಟ್ಟಿದ ದುಃಖ

ಹಿರಿಯ ಪತ್ರಕರ್ತ ಹಾಗೂ 'ಹಾಯ್ ಬೆಂಗಳೂರು' ಪತ್ರಿಕೆ ಸಂಸ್ಥಾಪಕ ರವಿ ಬೆಳೆಗೆರೆ ನಿಧನದ ವಾರ್ತೆ ತಿಳಿಯುತ್ತಿದ್ದಂತೆಯೇ ಅಂತಿಮ ದರ್ಶನಕ್ಕಾಗಿ ಪ್ರಾರ್ಥನಾ ಶಾಲೆಯತ್ತ ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ.

ಬೆಂಗಳೂರು: ಹಿರಿಯ ಪತ್ರಕರ್ತ ಹಾಗೂ 'ಹಾಯ್ ಬೆಂಗಳೂರು' ಪತ್ರಿಕೆ ಸಂಸ್ಥಾಪಕ ರವಿ ಬೆಳೆಗೆರೆ ನಿಧನದ ವಾರ್ತೆ ತಿಳಿಯುತ್ತಿದ್ದಂತೆಯೇ ಅಂತಿಮ ದರ್ಶನಕ್ಕಾಗಿ ಪ್ರಾರ್ಥನಾ ಶಾಲೆಯತ್ತ ಅಭಿಮಾನಿಗಳ ದಂಡೇ ಹರಿದು ಬರುತ್ತಿದೆ.

ಸಾವಿರಾರು ಅಭಿಮಾನಿಗಳು ಇಂದು ಬೆಳಿಗ್ಗೆಯಿಂದಲೇ ಪ್ರಾರ್ಥನಾ ಶಾಲೆಯ ಅಂಗಳದಲ್ಲಿ ಜಮಾಯಿಸಿದ್ದಾರೆ. ಅಲ್ಲಿ ದುಃಖ ಮಡುಗಟ್ಟಿದೆ. ಅಭಿಮಾನಿಗಳ ಜೊತೆಗೆ ಮಾಧ್ಯಮ ಪ್ರತಿನಿಧಿಗಳು ಚಿತ್ರರಂಗದ ಅನೇಕ ಕಲಾವಿದರು, ನಿರ್ದೇಶಕರು ಸಹ ಭೇಟಿ ನೀಡಿ ಅಗಲಿದ ಗೆಳೆಯ ರವಿ ಬೆಳಗೆರೆಗೆ ಅಂತಿಮ ಶ್ರದ್ದಾಂಜಲಿ ಸಲ್ಲಿಸಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳುತ್ತಿರುವ ದೃಶ್ಯ ಸಾಮಾನ್ಯವಾಗಿದೆ.

1958ರ ಮಾರ್ಚ್ 15 ರಂದು ಬಳ್ಳಾರಿ ಜಿಲ್ಲೆಯಲ್ಲಿ ಜನಿಸಿದ್ದ ರವಿ ಬೆಳೆಗೆರೆ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದು ಪ್ರಾಧ್ಯಾಪಕರಾಗಿ ವೃತ್ತಿ ಆರಂಭಿಸಿದ್ದರು. ರವಿ ಬೆಳಗೆರೆ ಅವರ ಮೇಲೆ ತೆಲುಗು ಸಾಹಿತ್ಯದ ಪ್ರಭಾವ ವಿಪರೀತವಾಗಿತ್ತು ಆದ್ದರಿಂದಲೇ ಅವರು ಹೆಚ್ಚಾಗಿ ಬರವಣಿಗೆಯಲ್ಲಿ ತೆಲುಗಿನ ಶಬ್ದಗಳನ್ನು ಬಳಸುತ್ತಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT