ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸುತ್ತಿರುವ ಸಚಿವ ಸುಧಾಕರ್ 
ರಾಜ್ಯ

30 ತಿಂಗಳಲ್ಲಿ ಚಿತ್ರದುರ್ಗ ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಪೂರ್ಣ: ಸಚಿವ ಸುಧಾಕರ್

30 ತಿಂಗಳುಗಳಲ್ಲಿ ಚಿತ್ರದುರ್ಗ ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವ ಉದ್ದೇಶವಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಹೇಳಿದ್ದಾರೆ. 

ಚಿತ್ರದುರ್ಗ: 30 ತಿಂಗಳುಗಳಲ್ಲಿ ಚಿತ್ರದುರ್ಗ ವೈದ್ಯಕೀಯ ಕಾಲೇಜು ಕಟ್ಟಡ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವ ಉದ್ದೇಶವಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ಹೇಳಿದ್ದಾರೆ. 

ಚಿತ್ರದುರ್ಗ ಜಿಲ್ಲೆಗೆ ಶುಕ್ರವಾರ ಭೇಟಿ ನೀಡಿರುವ ಸುಧಾಕರ್ ಅವರು, ಕಾಲೇಜು ಸ್ಥಾಪನೆಗೆ ಅಗತ್ಯ ಸ್ಥಳ ವೀಕ್ಷಣೆ ಮಾಡಿದರು. 

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರದುರ್ಗದಲ್ಲಿ ನಿರ್ಮಾಣಗೊಳ್ಳಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ವಾರದೊಳಗೆ ನೀಲನಕ್ಷೆ ಸಿದ್ಧಪಡಿಸಲಾಗುವುದು. ಕಾಲೇಜು ಸ್ಥಾಪನೆಗಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೂ.50 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಚಿತ್ರದುರ್ಗ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಕನಿಷ್ಠ ರೂ.500 ಕೋಟಿ ಬೇಕಾಗಲಿದೆ. ಸಂಪೂರ್ಣ ಅನುದಾನವನ್ನು ರಾಜ್ಯ ಸರ್ಕಾರವೇ ಭರಿಸಲಿದೆ. ಇದಕ್ಕೆ ಮುಖ್ಯಮಂತ್ರಿಗಳು ಒಪ್ಪಿಗೆ ನೀಡಿದ್ದಾರೆ. ರಾಜ್ಯ ಸರ್ಕಾರದ ಅನುದಾನದ ಜೊತೆಗೆ ಜಿಲ್ಲಾ ಖನಿಜ ಪ್ರತಿಷ್ಠಾನದ ನಿಧಿ 3ನೇ ಒಂದು ಭಾಗ ಹಣ ಸಹ ಕಾಲೇಜು ನಿರ್ಮಾಣಕ್ಕೆ ಬಳಕೆ ಮಾಡಲಾಗುತ್ತಿದೆ. 

2021-2022ನೇ ಸಾಲಿಗೆ ಕಾಲೇಜಿನಲ್ಲಿ ಕೋರ್ಸ್ ಆರಂಭಿಸುವ ಗುರಿ ಹೊಂದಲಾಗಿದೆ. 30 ತಿಂಗಳುಗಳಲ್ಲಿ ಕಟ್ಟಡ ನಿರ್ಮಾಣ ಪೂರ್ಣಗೊಳಿಸುವ ಉದ್ದೇಶವಿದೆ ಎಂದು ಹೇಳಿದ್ದಾರೆ. 

ಸರ್ಕಾರಿ ವೈದ್ಯಕೀಯ ಕಾಲೇಜು ಜೊತೆಗೆ ಇದಕ್ಕೆ ಪೂರಕವಾಗಿ ಪ್ಯಾರಾ ಮೆಡಿಕಲ್, ನರ್ಸಿಂಗ್ ಕೋರ್ಸ್'ಗಳು ಸೇರಿ ವಿವಿಧ ವೈದ್ಯಕೀಯ ಕೋರ್ಸ್'ಗಳು ಇಲ್ಲಿ ಪ್ರಾರಂಭವಾಗಲಿವೆ. ಮೆಡಿಕಲ್ ಕಾಲೇಜಿಗೆ ಕನಿಷ್ಠ 700 ಹಾಸಿಗೆ ಸೌಲಭ್ಯವಿರಬೇಕು. ಈಗಾಗಲೇ 450 ಹಾಸಿಗೆಗಳು ಆಸ್ಪತ್ರೆಯ ಸೌಲಭ್ಯವಿದೆ. ಇದು ಮುಂದಿನ ದಿನಗಳಲ್ಲಿ ವೈದ್ಯಕೀಯ ಕಾಲೇಜಿನೊಂದಿಗೆ 700 ಹಾಸಿಗೆ ಆಸ್ಪತ್ರೆಯಾಗಿ ಪರಿವರ್ತನೆಯಾಗಲಿದೆ ಎಲ್ಲಾ ಜಿಲ್ಲೆಗಳಲ್ಲಿಯೂ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣದ ಗುರಿ ಇದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

FIFA World Cup 2026: ಉದ್ಘಾಟನಾ ಪಂದ್ಯದಲ್ಲಿ ಮೂರು ರೆಡ್ ಕಾರ್ಡ್ ಗಳು; 2-0 ಅಂತರದಿಂದ ದಕ್ಷಿಣ ಆಫ್ರಿಕಾ ಮಣಿಸಿದ ಮೆಕ್ಸಿಕೊ

ಭಾರತೀಯ 'ಶೂಟಿಂಗ್' ದಂತಕತೆ, ಮನುಬಾಕರ್ ಕೋಚ್ ಜಸ್ಪಾಲ್ ರಾಣಾ ನಿಧನ!

ಇರಾನ್‌ ಜೊತೆ ಯುದ್ಧ ಅಂತ್ಯಗೊಂಡಿದೆ, ವಾರಾಂತ್ಯದಲ್ಲಿ ಯುರೋಪಿನಲ್ಲಿ ಶಾಂತಿ ಒಪ್ಪಂದ: ಡೊನಾಲ್ಡ್ ಟ್ರಂಪ್ ಘೋಷಣೆ

ಇಂಧನ ಸಂಗ್ರಹಣೆ-ಕಾಳಸಂತೆ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ: ಪೆಟ್ರೋಲ್ ಬಂಕ್‌ಗಳಲ್ಲಿ Bulk ಇಂಧನ ಖರೀದಿಗೆ ನಿಷೇಧ..!

US-Iran war: 'ಒಪ್ಪಂದಕ್ಕೆ ಒಪ್ಪಿಗೆ ಸಿಕ್ಕಿದೆ’ ಎಂದ ಟ್ರಂಪ್‌; ‘ಇನ್ನೂ ನಿರ್ಧಾರವೇ ಆಗಿಲ್ಲ’ ಎಂದ ಇರಾನ್‌ - ಶಾಂತಿ ಒಪ್ಪಂದದ ಸುತ್ತ ಹೆಚ್ಚಿದ ಅನಿಶ್ಚಿತತೆ..!

SCROLL FOR NEXT