ರಾಜ್ಯ

10 ವರ್ಷದಿಂದ ಪ್ರೀತಿಸಿದ್ದ ಹುಡುಗಿ ಸಿಕ್ಕಿಲ್ಲ, ತಂಗಿ ಮದುವೆಯೂ ರದ್ದು: ಮನನೊಂದ ಯುವಕ ಆತ್ಮಹತ್ಯೆ!

ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿಯೂ ಸಿಕ್ಕಿಲ್ಲ,  ನಿಶ್ಚಯವಾಗಿದ್ದ ತಂಗಿ ಮದುವೆಯೂ ಕಾರಣಾಂತರದಿಂದ ಮುರಿದು ಹೋಯ್ತು ಎಂಬ ಕಾರಣಗಳಿಂದ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು: ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿಯೂ ಸಿಕ್ಕಿಲ್ಲ,  ನಿಶ್ಚಯವಾಗಿದ್ದ ತಂಗಿ ಮದುವೆಯೂ ಕಾರಣಾಂತರದಿಂದ ಮುರಿದು ಹೋಯ್ತು ಎಂಬ ಕಾರಣಗಳಿಂದ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ವಿಜಯಶ್ರೀಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬೆಂಗಳೂರು ಮೂಲದ ಯುವಕ ಚೇತನ್ ಶರ್ಮ(29) ಆತ್ಮಹತ್ಯೆಗೆ ಶರಣಾದ ದುರ್ದೈವಿ.

ಕಂಪ್ಯೂಟರ್ ಸೈನ್ಸ್ ಶಿಪ್ಲೋಮಾ ಮಾಡಿದ್ದ ಚೇತನ್ ಕಳೆದ ಹತ್ತು ವರ್ಷಗಳಿಂಡ ಯುವತಿಯೊಬ್ಬಳನ್ನು ಪ್ರೀತಿಸಿದ್ದ.  ಆದರೆ ಇತ್ತೀಚೆಗೆ ಅವರ ಪ್ರೀತಿಯಲ್ಲಿ ಬಿರುಕುಂಟಾಗಿ ಯುವತಿ ದೂರವಾಗಿದ್ದಳು.

ಇದಲ್ಲದೆ ಚೇತನ್ ತಂಗಿಗೆ ನಿಶ್ಚಯವಾಗಿದ್ದ ಮದುವೆ ಸಹ ಕಾರಣಾಂತರಗಳಿಂದ ರದ್ದಾಗಿದೆ. ಇದರಿಂದಾಗಿ ಚೇತನ್ ಖಿನ್ನತೆಗೆ ಒಳಗಾಗಿದ್ದ. ಮತ್ತೀಗ ತಾನಿದ್ದ ಬಾಡಿಗೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ  ಶರಣಾಗಿದ್ದಾನೆ.

ಘಟನೆ ಸಂಬಂಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT