ರಾಜ್ಯ

10 ವರ್ಷದಿಂದ ಪ್ರೀತಿಸಿದ್ದ ಹುಡುಗಿ ಸಿಕ್ಕಿಲ್ಲ, ತಂಗಿ ಮದುವೆಯೂ ರದ್ದು: ಮನನೊಂದ ಯುವಕ ಆತ್ಮಹತ್ಯೆ!

ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿಯೂ ಸಿಕ್ಕಿಲ್ಲ,  ನಿಶ್ಚಯವಾಗಿದ್ದ ತಂಗಿ ಮದುವೆಯೂ ಕಾರಣಾಂತರದಿಂದ ಮುರಿದು ಹೋಯ್ತು ಎಂಬ ಕಾರಣಗಳಿಂದ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು: ಹತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಹುಡುಗಿಯೂ ಸಿಕ್ಕಿಲ್ಲ,  ನಿಶ್ಚಯವಾಗಿದ್ದ ತಂಗಿ ಮದುವೆಯೂ ಕಾರಣಾಂತರದಿಂದ ಮುರಿದು ಹೋಯ್ತು ಎಂಬ ಕಾರಣಗಳಿಂದ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ವಿಜಯಶ್ರೀಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬೆಂಗಳೂರು ಮೂಲದ ಯುವಕ ಚೇತನ್ ಶರ್ಮ(29) ಆತ್ಮಹತ್ಯೆಗೆ ಶರಣಾದ ದುರ್ದೈವಿ.

ಕಂಪ್ಯೂಟರ್ ಸೈನ್ಸ್ ಶಿಪ್ಲೋಮಾ ಮಾಡಿದ್ದ ಚೇತನ್ ಕಳೆದ ಹತ್ತು ವರ್ಷಗಳಿಂಡ ಯುವತಿಯೊಬ್ಬಳನ್ನು ಪ್ರೀತಿಸಿದ್ದ.  ಆದರೆ ಇತ್ತೀಚೆಗೆ ಅವರ ಪ್ರೀತಿಯಲ್ಲಿ ಬಿರುಕುಂಟಾಗಿ ಯುವತಿ ದೂರವಾಗಿದ್ದಳು.

ಇದಲ್ಲದೆ ಚೇತನ್ ತಂಗಿಗೆ ನಿಶ್ಚಯವಾಗಿದ್ದ ಮದುವೆ ಸಹ ಕಾರಣಾಂತರಗಳಿಂದ ರದ್ದಾಗಿದೆ. ಇದರಿಂದಾಗಿ ಚೇತನ್ ಖಿನ್ನತೆಗೆ ಒಳಗಾಗಿದ್ದ. ಮತ್ತೀಗ ತಾನಿದ್ದ ಬಾಡಿಗೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ  ಶರಣಾಗಿದ್ದಾನೆ.

ಘಟನೆ ಸಂಬಂಧ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT