ಕೇರಳ ರಾಜ್ಯಗಳ ಬಸ್ 
ರಾಜ್ಯ

ಏಳು ತಿಂಗಳ ಬಳಿಕ ಮಂಗಳೂರು- ಕಾಸರಗೋಡು ನಡುವೆ ಬಸ್ ಸೇವೆ ಪುನಾರಂಭ

ಏಳು ತಿಂಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು-ಕೇರಳದ ಕಾಸರಗೋಡು ಜಿಲ್ಲೆಗಳ ನಡುವೆ ಸರಕಾರಿ ಬಸ್ ಸಂಚಾರ ಸೋಮವಾರ ಅರಂಭಗೊಂಡಿದೆ.

ಮಂಗಳೂರು: ಏಳು ತಿಂಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು-ಕೇರಳದ ಕಾಸರಗೋಡು ಜಿಲ್ಲೆಗಳ ನಡುವೆ ಸರಕಾರಿ ಬಸ್ ಸಂಚಾರ ಸೋಮವಾರ ಅರಂಭಗೊಂಡಿದೆ.

ಸೋಮವಾರ ಬೆಳಗ್ಗೆ 7ರಿಂದ ಸುಮಾರು 20 ಬಸ್‌ ಗಳನ್ನು ಮಂಗಳೂರಿನಿಂದ ಕಾಸರಗೋಡಿಗೆ ಮತ್ತು 20 ಬಸ್‌ಗಳು ಕಾಸರಗೋಡಿನಿಂದ ಮಂಗಳೂರಿಗೆ ಆಗಮಿಸಿವೆ. ಎರಡೂ ರಾಜ್ಯಗಳ 40 ಸರಕಾರಿ ಬಸ್‌ಗಳು ಪ್ರಯಾಣಿಕರ ಸೇವೆ ಆರಂಭಿಸಿವೆ. ಕೋವಿಡ್ 19 ನಿಯಮಗಳ ಪಾಲನೆಯೊಂದಿಗೆ ಬಸ್ ಸಂಚಾರ ಆರಂಭಿಸಲಾಗಿದೆ. 

ಲಾಕ್‌ ಡೌನ್ ತೆರವಿನ ಬಳಿಕ ಹಂತ ಹಂತವಾಗಿ ಬಸ್ ಸಂಚಾರಕ್ಕೆ ಅನುಮತಿ ನೀಡಿದ ವೇಳೆ ಮಂಗಳೂರಿನಿಂದ ಹೊರಟ ಸರಕಾರಿ ಬಸ್‌ಗಳು ತಲಪಾಡಿವರೆಗೆ ಚಲಿಸುತ್ತಿತ್ತು. ಇದೀಗ ಮಂಗಳೂರಿನಿಂದ ಕಾಸರಗೋಡಿಗೆ ಮತ್ತು ಕಾಸರಗೋಡಿನಿಂದ ಮಂಗಳೂರಿಗೆ ಬಸ್‌ಗಳು ಸಂಚರಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT