ಕೇರಳ ರಾಜ್ಯಗಳ ಬಸ್ 
ರಾಜ್ಯ

ಏಳು ತಿಂಗಳ ಬಳಿಕ ಮಂಗಳೂರು- ಕಾಸರಗೋಡು ನಡುವೆ ಬಸ್ ಸೇವೆ ಪುನಾರಂಭ

ಏಳು ತಿಂಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು-ಕೇರಳದ ಕಾಸರಗೋಡು ಜಿಲ್ಲೆಗಳ ನಡುವೆ ಸರಕಾರಿ ಬಸ್ ಸಂಚಾರ ಸೋಮವಾರ ಅರಂಭಗೊಂಡಿದೆ.

ಮಂಗಳೂರು: ಏಳು ತಿಂಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು-ಕೇರಳದ ಕಾಸರಗೋಡು ಜಿಲ್ಲೆಗಳ ನಡುವೆ ಸರಕಾರಿ ಬಸ್ ಸಂಚಾರ ಸೋಮವಾರ ಅರಂಭಗೊಂಡಿದೆ.

ಸೋಮವಾರ ಬೆಳಗ್ಗೆ 7ರಿಂದ ಸುಮಾರು 20 ಬಸ್‌ ಗಳನ್ನು ಮಂಗಳೂರಿನಿಂದ ಕಾಸರಗೋಡಿಗೆ ಮತ್ತು 20 ಬಸ್‌ಗಳು ಕಾಸರಗೋಡಿನಿಂದ ಮಂಗಳೂರಿಗೆ ಆಗಮಿಸಿವೆ. ಎರಡೂ ರಾಜ್ಯಗಳ 40 ಸರಕಾರಿ ಬಸ್‌ಗಳು ಪ್ರಯಾಣಿಕರ ಸೇವೆ ಆರಂಭಿಸಿವೆ. ಕೋವಿಡ್ 19 ನಿಯಮಗಳ ಪಾಲನೆಯೊಂದಿಗೆ ಬಸ್ ಸಂಚಾರ ಆರಂಭಿಸಲಾಗಿದೆ. 

ಲಾಕ್‌ ಡೌನ್ ತೆರವಿನ ಬಳಿಕ ಹಂತ ಹಂತವಾಗಿ ಬಸ್ ಸಂಚಾರಕ್ಕೆ ಅನುಮತಿ ನೀಡಿದ ವೇಳೆ ಮಂಗಳೂರಿನಿಂದ ಹೊರಟ ಸರಕಾರಿ ಬಸ್‌ಗಳು ತಲಪಾಡಿವರೆಗೆ ಚಲಿಸುತ್ತಿತ್ತು. ಇದೀಗ ಮಂಗಳೂರಿನಿಂದ ಕಾಸರಗೋಡಿಗೆ ಮತ್ತು ಕಾಸರಗೋಡಿನಿಂದ ಮಂಗಳೂರಿಗೆ ಬಸ್‌ಗಳು ಸಂಚರಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT