ರಾಜ್ಯ

ದೀಪಾವಳಿಯ ಬಲಿಪಾಡ್ಯಮಿ: ನಾಡಿನ ಜನತೆಗೆ ಶುಭ ಕೋರಿದ ಮುಖ್ಯಮಂತ್ರಿ

Nagaraja AB

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಯ ಬಲಿಪಾಡ್ಯಮಿಗೆ ಮುಖ್ಯಮಂತ್ರಿ ಹಾಗೂ ಸಚಿವರು ನಾಡಿನ ಜನತೆಗೆ ಶುಭ ಕೋರಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ನಾಡಿನ ಸಮಸ್ತ ಜನತೆಗೆ ಬಲಿ ಪ್ರತಿಪದಾ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ಸಂಕಷ್ಟಗಳು ಹಾಗೂ ಸಾಂಕ್ರಾಮಿಕದ ಕತ್ತಲು ಕಳೆದು ಸಂತಸ ಸಂಭ್ರಮಗಳ ಬೆಳಗು ಮೂಡಲಿ ಎಂದು ಪ್ರಾರ್ಥಿಸೋಣ ಎಂದಿದ್ದಾರೆ.

ನಮ್ಮನ್ನು ಕಾಯುತ್ತಿರುವ ನಮ್ಮ ಯೋಧರ ಹಾಗೂ ಅವರ ಕುಟುಂಬದವರ ಕರ್ತವ್ಯನಿಷ್ಠೆ, ತ್ಯಾಗಗಳಿಗೆ ನಮ್ಮ ಕೃತಜ್ಞತೆಗಳ ಪ್ರತೀಕವಾಗಿ ಒಂದು ದೀಪ ಹಚ್ಚೋಣ ಎಂದು ತಿಳಿಸಿದ್ದಾರೆ.

SCROLL FOR NEXT