ಸಿಸಿಟಿವಿ ದೃಶ್ಯ 
ರಾಜ್ಯ

ಮಂಗಳೂರು: ಟೆಕ್ಸ್ ಟೈಲ್ಸ್ ಉದ್ಯಮಿಯ ಮೇಲೆ ತಲ್ವಾರ್ ದಾಳಿ, ಪುಂಡರ ಕೃತ್ಯ ಸಿಸಿಟಿವಿಯಲ್ಲಿ ಸೆರೆ

ನವೆಂಬರ್ 15 ರ ಭಾನುವಾರ ರಾತ್ರಿ ಬಜ್ಪೆ ಪೋಲೀಸ್ ಠಾಣೆ ವ್ಯಾಪ್ತಿಯ ಕಂದಾವರದಲ್ಲಿ ಉದ್ಯಮಿ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. 

ಮಂಗಳೂರು: ನವೆಂಬರ್ 15ರ ಭಾನುವಾರ ರಾತ್ರಿ ಬಜ್ಪೆ ಪೋಲೀಸ್ ಠಾಣೆ ವ್ಯಾಪ್ತಿಯ ಕಂದಾವರದಲ್ಲಿ ಉದ್ಯಮಿ ಮೇಲೆ ತಲ್ವಾರ್ ನಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. 

ಹಲ್ಲೆಗೊಳಗಾದ ವ್ಯಕ್ತಿಯನ್ನು ಕಂದಾವರ ಕೈಕಂಬ ನಿವಾಸಿ ಅಬ್ದುಲ್ ಅಜೀಜ್ (58) ಎಂದು ಗುರುತಿಸಲಾಗಿದೆ.

ಭಾನುವಾರ ರಾತ್ರಿ 10.30 ರ ಸುಮಾರಿಗೆ ಅಬ್ದುಲ್ ಅಜೀಜ್ ನಮಾಜ್ ಮುಗಿಸಿದ ನಂತರ ಮಸೀದಿಯಿಂದ ತನ್ನ ಕಾರಿನ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಇಬ್ಬರು ಯುವಕರು ಇದ್ದಕ್ಕಿದ್ದಂತೆ ತಲ್ವಾರ್ ನಿಂದ ಹಲ್ಲೆ ನಡೆಸಿದರು. ಹಲ್ಲೆಯಿಂದ ಅಬ್ದುಲ್ ಅವರ ತಲೆ, , ಕೈ ಮತ್ತು ಕಾಲಿಗೆ ಗಾಯಗಳಾಗಿದೆ. ಹಲ್ಲೆ ನಂತರ ಆರೋಪ್ಗಳು ಪರಾರಿಯಾಗಿದ್ದಾರೆ.

ದಾಳಿಯ ಸಂಪೂರ್ಣ ದೃಶ್ಯಮಸೀದಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದು ವೈಯುಕ್ತಿಕ ದ್ವೇಷದ ಕಾರಣಕ್ಕೆ ನಡೆದ ದಾಳಿಎಂದು ಶಂಕಿಸಲಾಗಿದ್ದು ಗಾಯಗೊಂಡ ಅಜೀಜ್ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಂದಾವರ ಮಸೀದಿಯ ವ್ಯವಸ್ಥಾಪನಾ ಸಮಿತಿಯ ಸಕ್ರಿಯ ಸದಸ್ಯರಾದ ಅಜೀಜ್ ಟೆಕ್ಸ್ ಟೈಲ್ಸ್ ನಡೆಸುತ್ತಿದ್ದಾರೆ.

ಘಟನೆ ಸಂಬಂಧ ಬಜ್ಪೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT