ಎಸ್ ಆರ್ ವಿಶ್ವನಾಥ್ 
ರಾಜ್ಯ

ಲಿಂಗಾಯತ ನಿಗಮದ ಬೆನ್ನಲ್ಲೆ ಒಕ್ಕಲಿಗರ ಅಭಿವೃದ್ಧಿ ನಿಗಮಕ್ಕೆ ಒತ್ತಾಯ

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಆದೇಶ ಮಾಡಿದ ಬೆನ್ನಲ್ಲೇ ಒಕ್ಕಲಿಗರ ಅಭಿವೃದ್ಧಿ ನಿಗಮ ರಚನೆಗೂ ಕೂಗು ಕೇಳಿ ಬಂದಿದೆ.

ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಆದೇಶ ಮಾಡಿದ ಬೆನ್ನಲ್ಲೇ ಒಕ್ಕಲಿಗರ ಅಭಿವೃದ್ಧಿ ನಿಗಮ ರಚನೆಗೂ ಕೂಗು ಕೇಳಿ ಬಂದಿದೆ.

ಇಂದು ವಿಧಾನಸೌಧದಲ್ಲಿ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಮಾತನಾಡಿ, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ನಿರ್ಧಾರ ಸ್ವಾಗತಾರ್ಹ. ಲಿಂಗಾಯತ ಅಭಿವೃಧ್ಧಿ ನಿಗಮಕ್ಕೆ ನಮ್ಮ ತಕರಾರು ಇಲ್ಲ. ಅದೇ ರೀತಿ ಒಕ್ಕಲಿಗರ ಅಭಿವೃದ್ಧಿ ನಿಗಮವನ್ನೂ ರಚಿಸಲಿ ಎಂದು ಆಗ್ರಹಿಸಿದ್ದಾರೆ.

ಈ ಸಂಬಂಧ ಸದ್ಯದಲ್ಲೇ ಮುಖ್ಯಮಂತ್ರಿಗಳನ್ನು ಒಕ್ಕಲಿಗ ಸಮುದಾಯದ ನಾಯಕರು ‌ಭೇಟಿ ಮಾಡಿ ಒತ್ತಾಯಿಸುತ್ತೇವೆ. ವೀರಶೈವ ಲಿಂಗಾಯತ ಸಮುದಾಯ ದೊಡ್ಡದು ಅದೇ ರೀತಿ ಒಕ್ಕಲಿಗ ಸಮುದಾಯವೂ ದೊಡ್ಡದು ಎಂದರು.

ಒಕ್ಕಲಿಗ ಸಮುದಾಯದಲ್ಲೂ ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿದ್ದಾರೆ. ಹಾಗಾಗಿ ಒಕ್ಕಲಿಗರ ಅಭಿವೃದ್ಧಿ ನಿಗಮ ರಚನೆಗೆ ಒತ್ತಾಯಿಸಿ, ಸಮುದಾಯದ ಸಚಿವರು, ಶಾಸಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ವಿಶ್ವನಾಥ್ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಒಪ್ಪಂದಕ್ಕೆ ಒಪ್ಪದಿದ್ದರೆ ಏನೂ ಉಳಿಯಲ್ಲ, ಯುರೇನಿಯಂ ಕೊಟ್ಬಿಡಿ; ಇರಾನ್ ಗೆ ಮತ್ತೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ಯುರೇನಿಯಂ ಹಸ್ತಾಂತರ, ಪರಮಾಣು ನಿರ್ಬಂಧ: 5 ಷರತ್ತುಗಳನ್ನು ಇರಾನ್ ಮುಂದಿಟ್ಟ ಅಮೆರಿಕ!

IPL 2026: ನಿರಾಶೆಯಾಗಿದೆ.. ಆದ್ರೆ ಮತ್ತೆ ಸೂರ್ಯೋದಯವಾಗುತ್ತದೆ: RCB ಬಳಿಕ ಭಾವುಕ ಶ್ರೇಯಸ್ ಅಯ್ಯರ್ ಹೇಳಿಕೆ!

IPL 2026: 'It’s okay ಮತ್ತೆ ಈ ರೀತಿ ಮಾಡ್ಬೇಡ': 49 ಎಂದು ಗೇಲಿ ಮಾಡಿದ್ದ ಪಂಜಾಬ್ ಗೆ ಬಟ್ಟೆ ಸುತ್ತಿ ಹೊಡೆದ RCB

IPL 2026: ಕೊನೆಯ ಓವರ್ ನಲ್ಲಿ ಭರ್ಜರಿ ಜಯ, ಪ್ಲೇಆಫ್ ಗೆ RCB ಲಗ್ಗೆ; ರೇಸ್ ನಿಂದ PBKS ಔಟ್, CSK ಆಸೆ ಜೀವಂತ!

SCROLL FOR NEXT