ಸಂಪತ್ ರಾಜ್ 
ರಾಜ್ಯ

ಡಿಜೆ ಹಳ್ಳಿ ಹಿಂಸಾಚಾರ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಸಿಸಿಬಿ ಕಸ್ಟಡಿಗೆ; ಕೋರ್ಟ್ ಆದೇಶ

ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಕೋರ್ಟ್ ಸಿಸಿಬಿ ಕಸ್ಟಡಿಗೆ ನೀಡಿದೆ. 

ಬೆಂಗಳೂರು: ಬೆಂಗಳೂರಿನ ಡಿ.ಜೆ. ಹಳ್ಳಿ ಮತ್ತು ಕೆ.ಜಿ. ಹಳ್ಳಿ ಗಲಭೆ ಪ್ರಕರಣ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಕೋರ್ಟ್ ಸಿಸಿಬಿ ಕಸ್ಟಡಿಗೆ ನೀಡಿದೆ. 

ಬಹಳ ದಿನಗಳಿಂದ ತಲೆ ಮರೆಸಿಕೊಂಡಿದ್ದ ಸಂಪತ್ ರಾಜ್ ಬಂಧನಕ್ಕಾಗಿ ಸಿಸಿಬಿ ಐದು ತಂಡಗಳನ್ನು ರಚಿಸಿದ್ದು, ಬೆಂಗಳೂರು ಸೇರಿದಂತೆ ಹೊರ ರಾಜ್ಯಗಳಲ್ಲೂ ಕೂಡಾ ಸಂಪತ್ ರಾಜ್ ಗಾಗಿ ಹುಡುಕಾಟ ನಡೆಸಿತ್ತು. ಇನ್ನು ಸಂಪತ್ ಸೆರೆ ಸಿಕ್ಕ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಅವರನ್ನು ಇಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಸಂಪತ್ ರನ್ನು 10 ದಿನ ಕಸ್ಟಡಿಗೆ ನೀಡುವಂತೆ ಸಿಸಿಬಿ ಪರ ವಕೀಲರು ಮನವಿ ಮಾಡಿದ್ದರು. ಆದರೆ ಕೋರ್ಟ್ 2 ದಿನಕ್ಕೆ ಮಾತ್ರ ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. 

ಸಂಪತ್ ರಾಜ್ ಆಪ್ತ ರಿಯಾಜುದ್ದೀನ್ ರನ್ನು ಸಿಸಿಬಿ ಪೊಲೀಸರು ಬಂಧಿಸಿ ಆತ ನೀಡಿದ ಸುಳಿವಿನ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಸಂಪತ್ ರಾಜ್ ನನ್ನು ಬಂಧಿಸಿದ್ದರು. ಅಂತಿಮವಾಗಿ ಅವರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದರು.

ವಿವಾದಿತ ಪೋಸ್ಟ್ ವೊಂದಕ್ಕೆ ಸಂಬಂಧಿಸಿದಂತೆ ಆಗಸ್ಟ್ 11ರಂದು ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಭೆ ಸೃಷ್ಟಿಯಾಗಿತ್ತು. ಏಕಾಏಕಿ ಬಂದಿದ್ದ 300ಕ್ಕೂ ಹೆಚ್ಚು ಉದ್ರಿಕ್ತರ ಗುಂಪು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹಾಗೂ ಅವರ ಸಹೋದರಿಯ ಮನೆಯ ಮೇಲೆ ದಾಳಿ ನಡೆಸಿದ್ದರು. ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯ ಮೇಲೂ ದಾಳಿ ನಡೆಸಿ ಧ್ವಂಸಗೊಳಿಸಿದ್ದರು. ಈವೇಳೆ ಸಾಕಷ್ಟು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯುಂಟಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಈವರೆಗೂ 421 ಮಂದಿಯನ್ನು ಬಂಧನಕ್ಕೊಳಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!