ಆನಂದ್ ಸಿಂಗ್ 
ರಾಜ್ಯ

ಬಳ್ಳಾರಿ ಜಿಲ್ಲೆ ವಿಭಜನೆ, ವದಂತಿಗಳಿಗೆ ಕಿವಿಗೊಡಬೇಡಿ: ಆನಂದ್ ಸಿಂಗ್

ಆಡಳಿತಾತ್ಮಕವಾಗಿ ಬಳ್ಳಾರಿ ಜಿಲ್ಲೆ ವಿಭಜನೆಗೊಂಡಿದ್ದು, ಈ ವಿಚಾರದಲ್ಲಿ ಜನ ಸಾಮಾನ್ಯರು ವದಂತಿಗಳಿಗೆ ಕಿವಿಗೊಡಬಾರದು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಮನವಿ ಮಾಡಿದ್ದಾರೆ.

ಹೊಸಪೇಟೆ: ಆಡಳಿತಾತ್ಮಕವಾಗಿ ಬಳ್ಳಾರಿ ಜಿಲ್ಲೆ ವಿಭಜನೆಗೊಂಡಿದ್ದು, ಈ ವಿಚಾರದಲ್ಲಿ ಜನ ಸಾಮಾನ್ಯರು ವದಂತಿಗಳಿಗೆ ಕಿವಿಗೊಡಬಾರದು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಜಯನಗರ ಜಿಲ್ಲೆ ರಚನೆಗೆ ತಾತ್ವಿಕ‌ ಒಪ್ಪಿಗೆ ಪಡೆದ ನಂತರ ಸ್ವಕ್ಷೇತ್ರಕ್ಕೆ ಆಗಮಿಸಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಳ್ಳಾರಿ, ವಿಜಯನಗರ ಜಿಲ್ಲೆಯ ಜನತೆ ಅಣ್ಣತಮ್ಮಂದಿರಂತೆ ಇದ್ದೇವೆ. ಮುಂದೆಯೂ ಒಟ್ಟಿಗೆ ಇರುತ್ತೇವೆ. ಇಂತಹ ಸಂದರ್ಭದಲ್ಲಿ ಯಾವುದೇ ವದಂತಿಗಳಿಗೆ ಕಿವಿಕೊಡಬಾರದು ಎಂದರು.

ಸಚಿವ ಸಂಪುಟದ ತೀರ್ಮಾನದಿಂದ ಕ್ಷೇತ್ರದಲ್ಲಿ ಸಂತಸದ ಹೊನಲು ಹರಿದಿದೆ. ವಿಜಯನಗರ ಜಿಲ್ಲೆಯ ಕೂಗು ಕೇವಲ ನನ್ನ ಕನಸು ಅಥವಾ ಹಠವಲ್ಲ, ಬಳ್ಳಾರಿ ಜಿಲ್ಲೆಯ ಎಲ್ಲಾ ಪಶ್ಚಿಮ ತಾಲೂಕುಗಳ ಬೇಡಿಕೆಯಾಗಿತ್ತು. ಮುಖ್ಯಮಂತ್ರಿಗಳು ಜನರ ಕೂಗಿಗೆ ಸ್ಪಂದಿಸಿ ಆಡಳಿತ್ಮಾಕವಾಗಿ ಜಿಲ್ಲೆ ವಿಭಜಿಸಿ ನೂತನ ಜಿಲ್ಲೆಗೆ ಸಕಾರಾತ್ಮಕವಾಗಿ ಅನುಮೋದನೆ ನೀಡಿದ್ದಾರೆ. ಇದೊಂದು ಚಾರಿತ್ರಿಕೆ ಬೆಳವಣಿಗೆ ಎಂದು ಹೇಳಿದರು.

ಆಡಳಿತ ಸುಗಮಗೊಳಿಸಿ ಜನರ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲೆ ರಚನೆ ಅಗತ್ಯವಾಗಿತ್ತು. ಜಿಲ್ಲೆ ರಚನೆ ಕುರಿತಂತೆ ಸಚಿವರು ಅನುಮೊದನೆ ನೀಡಿರುವುದು ಸಂತಸ ತಂದಿದೆ. ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ನೂತನ ಜಿಲ್ಲೆಯ ಕುರಿತು ಹರಿದಾಡುವ ಪ್ರಚೋದನೆಗಳಿಗೆ ಕಿವಿಕೊಡಬೇಡಿ ಎಂದು ಹೇಳಿದರು. 

ನೂತನ ಜಿಲ್ಲೆ ನಮ್ಮೆಲ್ಲರ ಕನಸು. ಇದು ಯಾರದೇ ಪ್ರತಿಷ್ಠೆಯಲ್ಲ. ಜಿಲ್ಲೆಯ ಅಭಿವೃದ್ಧಿಗೆ ಗಮನಹರಿಸುತ್ತೇನೆ. ಕೆಎಂಆರ್ ಸಿ ನಿಧಿಯಡಿ 16 ಸಾವಿರ ಕೋಟಿ ರೂ ಇದ್ದು, ಒಡಿಶಾದಲ್ಲಿ ನಡೆಸಿದಂತೆ ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಿ ಹಣ ಬಿಡುಗಡೆ ಮಾಡಬಹುದು ಎಂಬ ಸಲಹೆಯನ್ನು ಸಚಿವ ಸಂಪುಟಕ್ಕೆ ನೀಡಿದ್ದೇನೆ. ಜಿಲ್ಲಾ ಖನಿಜ ನಿಧಿ ಇರುವುದರಿಂದ ಆಡಳಿತಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT