ಹಂಪಿ (ಸಾಂಕೇತಿಕ ಚಿತ್ರ) 
ರಾಜ್ಯ

ಕೆಎಸ್ ಟಿ ಡಿಸಿ ಸೇವೆಗಳು ವಿಸ್ತರಣೆ!

ಕೊರೋನೋತ್ತರ ಅನ್ ಲಾಕ್ 5.0 ನಿಂದಾಗಿ ಪ್ರವಾಸೋದ್ಯಮ ಕ್ಷೇತ್ರ ಪ್ರವಾಸಿಗರಿಗೆ ತೆರೆದುಕೊಂಡಿದ್ದು, ಸೇವೆಗಳನ್ನು ಒದಗಿಸುವ ಖಾಸಗಿ ಉದ್ಯಮಗಳು ನೆಲ ಕಚ್ಚುತ್ತಿದ್ದರೆ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ತನ್ನ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಕೆಲಸದಲ್ಲಿ ನಿರತವಾಗಿದೆ.

ಬೆಂಗಳೂರು: ಕೊರೋನೋತ್ತರ ಅನ್ ಲಾಕ್ 5.0 ನಿಂದಾಗಿ ಪ್ರವಾಸೋದ್ಯಮ ಕ್ಷೇತ್ರ ಪ್ರವಾಸಿಗರಿಗೆ ತೆರೆದುಕೊಂಡಿದ್ದು, ಸೇವೆಗಳನ್ನು ಒದಗಿಸುವ ಖಾಸಗಿ ಉದ್ಯಮಗಳು ನೆಲ ಕಚ್ಚುತ್ತಿದ್ದರೆ, ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ತನ್ನ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಕೆಲಸದಲ್ಲಿ ನಿರತವಾಗಿದೆ.

ಇತ್ತೀಚಿನ ಕೆಲವು ತಿಂಗಳುಗಳಲ್ಲಿ ಕೆಎಸ್ ಟಿ ಡಿಸಿ ರಾಜ್ಯಾದ್ಯಂತ ಹಲವು ಬಜೆಟ್ ಹೊಟೇಲ್ ಗಳನ್ನು ಪ್ರಾರಂಭಿಸಿದ್ದು, ಆಲಮಟ್ಟಿ (21 ರೂಮ್ ಗಳು) ವಿಜಯಪುರ (21 ರೂಮ್) ಬರಚುಕ್ಕಿ (11 ರೂಮ್) ಬಿಆರ್ ಹಿಲ್ಸ್ (16) ಹಾಗೂ ತುಂಗ ಭದ್ರಾ ಅಣೆಕಟ್ಟೆ (20 ರೂಮ್) ಗಳ ವ್ಯವಸ್ಥೆಯನ್ನು ಪ್ರವಾಸಿಗರಿಗೆ ಹೊಸದಾಗಿ ಪ್ರಾರಂಭಿಸಿದೆ. ನವದೆಹಲಿಯಲ್ಲಿ ಕರ್ನಾಟಕ ಭವನ-3 ರಲ್ಲಿ 34 ರೂಮ್ ಗಳನ್ನೂ ಸಹ ಹೊಸದಾಗಿ ಕೆಎಸ್ ಟಿ ಡಿಸಿ ಪ್ರಾರಂಭಿಸಿದೆ. ಒಟ್ಟಾರೆ ದೇಶಾದ್ಯಂತ ಕೆಎಸ್ ಟಿಡಿಸಿ 122 ರೂಮ್ ಗಳನ್ನು ಹೊಸದಾಗಿ ಪ್ರವಾಸಿಗರಿಗಾಗಿ ಪ್ರಾರಂಭಿಸಿದೆ.

ಕೆಎಸ್ ಟಿ ಡಿಸಿ ವ್ಯವಸ್ಥಾಪಕ ನಿರ್ದೇಶಕ ಕುಮಾರ್ ಪುಷ್ಕರ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಈ ಬಗ್ಗೆ ಮಾತನಾಡಿದ್ದು, ಹೊಸ ಸೇವೆಗಳು ಪ್ರವಾಸೋದ್ಯಮದ ನೀತಿಯ ಭಾಗವಾಗಿದೆ ಎಂದು ತಿಳಿಸಿದ್ದಾರೆ. ಕೋಠಡಿಗಳಿಗೆ ತೆಗೆದುಕೊಳ್ಳಲಾಗುವ ಶುಲ್ಕ ಮಾರುಕಟ್ಟೆ ಬೇಡಿಕೆಗಳಿಗೆ ಅನುಗುಣವಾಗಿ ಬದಲಾವಣೆಯಾಗುತ್ತಿರುತ್ತದೆ ಎಂದು ತಿಳಿಸಿದ್ದಾರೆ.

ಇನ್ನು ಬಳಕೆಯಾಗದೇ ಉಳಿದಿರುವ ಸರ್ಕಾರಿ ಅತಿಥಿ ಗೃಹಗಳನ್ನೂ ಸಹ ಪ್ರವಾಸೋದ್ಯಮ ನಿಗಮ ತನ್ನ ವ್ಯಾಪ್ತಿಗೆ ತೆಗೆದುಕೊಳ್ಳುವುದಕ್ಕೆ ಚಿಂತನೆ ನಡೆಸುತ್ತಿದೆ. ಈ ಮೂಲಕ ಪ್ರವಾಸಿಗರು ಯಾವುದೇ ಆತಂಕವಿಲ್ಲದೇ ಪ್ರವಾಸ ಮಾಡುವ ವಾತಾವರಣ ನಿರ್ಮಿಸುವುವುದು ಉದ್ದೇಶವಾಗಿದೆ. 

ಉದ್ಯಮದ ದೃಷ್ಟಿಯಿಂದ ಇದು ವಿಸ್ತರಣೆಗೆ ಇರುವ ಅತ್ಯುತ್ತಮ ಅವಧಿ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT