ಬಂಧನ ಕೇಂದ್ರ 
ರಾಜ್ಯ

ನೆಲಮಂಗಲ ಬಳಿಯ ಬಂಧನ ಕೇಂದ್ರದಲ್ಲಿ ಮೊದಲ ಅಕ್ರಮ ವಲಸಿಗ ಸೂಡನ್ ಪ್ರಜೆ!

ದೇಶದಲ್ಲಿ ಹೆಚ್ಚು ಕಾಲ ಇದ್ದುದಕ್ಕಾಗಿ ವಿಚಾರಣೆಗೆ ಒಳಗಾಗಿರುವ ಸೂಡಾನ್ ದೇಶದ ಪ್ರಜೆಯೊಬ್ಬರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಬಳಿಯ ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿ ಇರಿಸಲಾಗಿದೆ. ಇವರು ಈ ಕೇಂದ್ರದ ಮೊದಲ ಕೈದಿಯಾಗಿದ್ದಾರೆ.

ಬೆಂಗಳೂರು: ದೇಶದಲ್ಲಿ ಹೆಚ್ಚು ಕಾಲ ಇದ್ದುದಕ್ಕಾಗಿ ವಿಚಾರಣೆಗೆ ಒಳಗಾಗಿರುವ ಸೂಡಾನ್ ದೇಶದ ಪ್ರಜೆಯೊಬ್ಬರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ಬಳಿಯ ಅಕ್ರಮ ವಲಸಿಗರ ಬಂಧನ ಕೇಂದ್ರದಲ್ಲಿ ಇರಿಸಲಾಗಿದೆ. ಇವರು ಈ ಕೇಂದ್ರದ ಮೊದಲ ಕೈದಿಯಾಗಿದ್ದಾರೆ.

35 ವರ್ಷದ ಒಮರ್ ಅಲ್ತಾಯಬ್ ಹಜಾಹ್ಮದ್ ಅವರನ್ನು ವಿದೇಶಿ ಕಾಯ್ದೆಯಡಿ ಕಳೆದ ವರ್ಷ ಯಲಹಂಕ ನ್ಯೂ ಟೌನ್ ನಲ್ಲಿ ಬಂಧಿಸಲಾಗಿತ್ತು.  2014ರಲ್ಲಿ ವಿದ್ಯಾರ್ಥಿ ವೀಸಾ ಮೇಲೆ ಭಾರತಕ್ಕೆ ಬಂದಿದ್ದ ಹಜಾಹ್ಮದ್   ವೀಸಾ ಅವಧಿ 2016ರಲ್ಲಿ ಮುಗಿದಿತ್ತು.
 2019 ಮಾರ್ಚ್ ನಲ್ಲಿ ಆತನ ಪಾಸ್ ಪೋರ್ಟ್ ಅವಧಿ ಮುಗಿದಿದ್ದರೂ ಬೆಂಗಳೂರಿನಲ್ಲಿಯೇ ಆತ ವಾಸ್ತವ್ಯ ಹೂಡಿದ್ದ.

ವಿಚಾರಣೆ ಮುಗಿದು ಆತನನ್ನು ದೇಶಕ್ಕೆ ಗಡಿಪಾರು ಮಾಡುವವರೆಗೂ ಆತನನ್ನು ಬಂಧನ ಕೇಂದ್ರದಲ್ಲಿಯೇ ಇರಿಸಲಾಗುತ್ತದೆ. ಬಂಧನ ಕೇಂದ್ರದ ಸುತ್ತ  ಒಂದು ಡಜನ್‌ಗೂ ಹೆಚ್ಚು ನಗರ ಸಶಸ್ತ್ರ ಮೀಸಲು  ಪೊಲೀಸ್ ಕಾನ್‌ಸ್ಟೆಬಲ್‌ಗಳನ್ನು ನಿಯೋಜಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬೆಂಗಳೂರಿನಿಂದ 40 ಕಿಲೋ ಮೀಟರ್ ದೂರದಲ್ಲಿನ ನೆಲಮಂಗಲ ಬಳಿಯ ಸೊಂಡೆಕೊಪ್ಪ ಗ್ರಾಮದಲ್ಲಿ ಈ ಬಂಧನ ಕೇಂದ್ರವಿದ್ದು, ಸಮಾಜ ಕಲ್ಯಾಣ ಅಗತ್ಯ ಸೌಕರ್ಯಗಳನ್ನು ಒದಗಿಸಿದೆ. ಕಳೆದ ವರ್ಷವಷ್ಟೇ ಸ್ಥಾಪನೆಯಾಗಿರುವ ನೂತನ ಬಂಧನ ಕೇಂದ್ರದಲ್ಲಿ 40 ಜನರನ್ನು ಬಂಧನದಲ್ಲಿ ಇಡಬಹುದಾಗಿದೆ. ಸೂಕ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT