ಅಪಘಾತದ ಚಿತ್ರ 
ರಾಜ್ಯ

ಕೊಪ್ಪಳ: ನಿಶ್ಚಿತಾರ್ಥಕ್ಕೆ ತೆರಳುತ್ತಿದ್ದಾಗ ಮಿನಿ ಬಸ್- ಬೈಕ್ ನಡುವೆ ಡಿಕ್ಕಿ, ಮೂವರ ದುರ್ಮರಣ

ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಮಿನಿ ಬಸ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದವರು ಹಾಗೂ ಬೈಕ್ ಸವಾರ ಸೇರಿ ಮೂವರು ಸಾವನ್ನಪ್ಪಿದ್ದಾರೆ. 

ಕೊಪ್ಪಳ: ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಮಿನಿ ಬಸ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ ನಲ್ಲಿದ್ದವರು ಹಾಗೂ ಬೈಕ್ ಸವಾರ ಸೇರಿ ಮೂವರು ಸಾವನ್ನಪ್ಪಿದ್ದಾರೆ. 

ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ನಿಟ್ಟಾಲಿ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಮಿನಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದಿದ್ದು ನಂತರ ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ಬಸ್ ನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. 

ಇನ್ನು ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು ಆ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಸ್ಥಳೀಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

SCROLL FOR NEXT