ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಳ್ಳತನವಾಗಿದ್ದ ದ್ವಿಚಕ್ರ ವಾಹನ ಬಿಡಲು ಲಂಚಕ್ಕೆ ಪೊಲೀಸರ ಬೇಡಿಕೆ!

ಕಳ್ಳತನವಾಗಿದ್ದ ಬೈಕ್ ಅನ್ನು ಪತ್ತೆ ಹಚ್ಚಿದ್ದ ಪೊಲೀಸರು ಅದನ್ನು ವಾಪಸ್ ನೀಡಲು ಮಾಲೀಕನಿಗೆ ಲಂಚದ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು: ಕಳ್ಳತನವಾಗಿದ್ದ ಬೈಕ್ ಅನ್ನು ಪತ್ತೆ ಹಚ್ಚಿದ್ದ ಪೊಲೀಸರು ಅದನ್ನು ವಾಪಸ್ ನೀಡಲು ಮಾಲೀಕನಿಗೆ ಲಂಚದ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.

ಪೊಲೀಸರು ಮತ್ತು ಬೈಕ್ ಮಾಲೀಕ ನಡೆಸಿದ ಸಂಭಾಷಣೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್  ಗೆ ದೊರೆತಿದೆ, ಮೋನು ಜಾನ್ ಎಂಬುವರ ಬಳಿ ಪೊಲೀಸರು ಕಳ್ಳತನವಾಗಿದ್ದ ದ್ವಿಚಕ್ರ ವಾಹನವನ್ನು ವಾಪಸ್ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ನಮ್ಮನನ್ನು ಖುಷಿಗೊಳಿಸಲು ನಮಗೆ ಏನಾದರೂ ನೀಡಿ ಎಂದು ಕೇಳಿರುವ ಆಡಿಯೋ ಲಭ್ಯವಾಗಿದೆ.

ಮುರುಗೇಶ್ ಪಾಳ್ಯದಿಂದ ಮೋನು ಜಾನ್ ಅವರ ಬೈಕ್ ಕಳ್ಳತನವಾಗಿತ್ತು,  ಅದನ್ನು ನಾನು ವಾಪಸ್ ತರಲು ಹೋದಾಗ ಪಕ್ಕಕ್ಕೆ ಕರೆದ ಪೊಲೀಸರು, ನಿಮ್ಮ ಬೈಕ್ ಪತ್ತೆ ಹಚ್ಚಲು   ನಾವು ಬಹಳ ಪ್ರಯತ್ನ ಪಟ್ಟಿದ್ದೇವೆ, ಹೀಗಾಗಿ ನಮಗೆ 15ಸಾವಿರ ಹಣ ನೀಡಿ ಎಂದು ಕೇಳಿದರು ಎಂದು ತಿಳಿಸಿದ್ದಾರೆ.

ಗುರುವಾರ ಕರೆ ಮಾಡಿದ ಜೆಪಿ ನಗರ ಪೊಲೀಸರು ನಿಮ್ಮ ಬೈಕ್ ಪತ್ತೆಯಾಗಿದೆ, ಬಂದು ತೆಗೆದುಕೊಂಡು ಹೋಗಿ ಎಂದು ಕರೆ ಮಾಡಿದ್ದಾರೆ, ಮತ್ತು ಇದಕ್ಕೆ ಯಾವುದೇ ಹಣ ಕಟ್ಟುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಇನ್ನೂ ಪೊಲೀಸರು ಪತ್ತೆ ಹಚ್ಚಿದ ಬೈಕ್ ವಾಪಸ್ ಪಡೆಯಲು ಯಾವುದೇ ಹಣ ನೀಡಬೇಕಿಲ್ಲ, ಲಂಚಕ್ಕೆ ಬೇಡಿಕೆ ಇಟ್ಟವರ ವಿರುದ್ಧ  ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಪಶ್ಚಿಮ ವಿಭಾಗದ ಸೌಮೇಂದು ಮುಖರ್ಜಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ