ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಕಳ್ಳತನವಾಗಿದ್ದ ದ್ವಿಚಕ್ರ ವಾಹನ ಬಿಡಲು ಲಂಚಕ್ಕೆ ಪೊಲೀಸರ ಬೇಡಿಕೆ!

ಕಳ್ಳತನವಾಗಿದ್ದ ಬೈಕ್ ಅನ್ನು ಪತ್ತೆ ಹಚ್ಚಿದ್ದ ಪೊಲೀಸರು ಅದನ್ನು ವಾಪಸ್ ನೀಡಲು ಮಾಲೀಕನಿಗೆ ಲಂಚದ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.

ಬೆಂಗಳೂರು: ಕಳ್ಳತನವಾಗಿದ್ದ ಬೈಕ್ ಅನ್ನು ಪತ್ತೆ ಹಚ್ಚಿದ್ದ ಪೊಲೀಸರು ಅದನ್ನು ವಾಪಸ್ ನೀಡಲು ಮಾಲೀಕನಿಗೆ ಲಂಚದ ಬೇಡಿಕೆ ಇಟ್ಟಿರುವ ಪ್ರಕರಣ ಬೆಳಕಿಗೆ ಬಂದಿದೆ.

ಪೊಲೀಸರು ಮತ್ತು ಬೈಕ್ ಮಾಲೀಕ ನಡೆಸಿದ ಸಂಭಾಷಣೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್  ಗೆ ದೊರೆತಿದೆ, ಮೋನು ಜಾನ್ ಎಂಬುವರ ಬಳಿ ಪೊಲೀಸರು ಕಳ್ಳತನವಾಗಿದ್ದ ದ್ವಿಚಕ್ರ ವಾಹನವನ್ನು ವಾಪಸ್ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ನಮ್ಮನನ್ನು ಖುಷಿಗೊಳಿಸಲು ನಮಗೆ ಏನಾದರೂ ನೀಡಿ ಎಂದು ಕೇಳಿರುವ ಆಡಿಯೋ ಲಭ್ಯವಾಗಿದೆ.

ಮುರುಗೇಶ್ ಪಾಳ್ಯದಿಂದ ಮೋನು ಜಾನ್ ಅವರ ಬೈಕ್ ಕಳ್ಳತನವಾಗಿತ್ತು,  ಅದನ್ನು ನಾನು ವಾಪಸ್ ತರಲು ಹೋದಾಗ ಪಕ್ಕಕ್ಕೆ ಕರೆದ ಪೊಲೀಸರು, ನಿಮ್ಮ ಬೈಕ್ ಪತ್ತೆ ಹಚ್ಚಲು   ನಾವು ಬಹಳ ಪ್ರಯತ್ನ ಪಟ್ಟಿದ್ದೇವೆ, ಹೀಗಾಗಿ ನಮಗೆ 15ಸಾವಿರ ಹಣ ನೀಡಿ ಎಂದು ಕೇಳಿದರು ಎಂದು ತಿಳಿಸಿದ್ದಾರೆ.

ಗುರುವಾರ ಕರೆ ಮಾಡಿದ ಜೆಪಿ ನಗರ ಪೊಲೀಸರು ನಿಮ್ಮ ಬೈಕ್ ಪತ್ತೆಯಾಗಿದೆ, ಬಂದು ತೆಗೆದುಕೊಂಡು ಹೋಗಿ ಎಂದು ಕರೆ ಮಾಡಿದ್ದಾರೆ, ಮತ್ತು ಇದಕ್ಕೆ ಯಾವುದೇ ಹಣ ಕಟ್ಟುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಇನ್ನೂ ಪೊಲೀಸರು ಪತ್ತೆ ಹಚ್ಚಿದ ಬೈಕ್ ವಾಪಸ್ ಪಡೆಯಲು ಯಾವುದೇ ಹಣ ನೀಡಬೇಕಿಲ್ಲ, ಲಂಚಕ್ಕೆ ಬೇಡಿಕೆ ಇಟ್ಟವರ ವಿರುದ್ಧ  ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಪಶ್ಚಿಮ ವಿಭಾಗದ ಸೌಮೇಂದು ಮುಖರ್ಜಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT