ಕ್ಷೌರಿಕ ಮಲ್ಲಿಕಾರ್ಜುನ ಶೆಟ್ಟಿ 
ರಾಜ್ಯ

ಮೈಸೂರು: ಹಿಂದುಳಿದ ವರ್ಗದವರ ಹೇರ್ ಕಟ್ಟಿಂಗ್ ಮಾಡಿದ್ದಕ್ಕೆ ಕ್ಷೌರಿಕನ ಕುಟುಂಬಕ್ಕೆ ಬಹಿಷ್ಕಾರ, 50 ಸಾವಿರ ರೂ. ದಂಡ!

ಹಿಂದುಳಿದ ವರ್ಗಕ್ಕೆ ಸೇರಿದವರ ತಲೆಕೂದಲು ಕತ್ತರಿಸಿದ್ದಕ್ಕೆ ಸಲೂನ್ ನ ಮಾಲಿಕನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿ ಗ್ರಾಮದ ಮುಖ್ಯಸ್ಥರು 50 ಸಾವಿರ ರೂಪಾಯಿ ದಂಡ ಕಟ್ಟುವಂತೆ ಒತ್ತಾಯಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹಲ್ಲಾರೆ ಗ್ರಾಮದಲ್ಲಿ ನಡೆದಿದೆ.

ನಂಜನಗೂಡು (ಮೈಸೂರು): ಹಿಂದುಳಿದ ವರ್ಗಕ್ಕೆ ಸೇರಿದವರ ತಲೆಕೂದಲು ಕತ್ತರಿಸಿದ್ದಕ್ಕೆ ಸಲೂನ್ ನ ಮಾಲಿಕನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿ ಗ್ರಾಮದ ಮುಖ್ಯಸ್ಥರು 50 ಸಾವಿರ ರೂಪಾಯಿ ದಂಡ ಕಟ್ಟುವಂತೆ ಒತ್ತಾಯಿಸಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹಲ್ಲಾರೆ ಗ್ರಾಮದಲ್ಲಿ ನಡೆದಿದೆ.

ಈ 21ನೇ ಶತಮಾನದಲ್ಲಿ ತಂತ್ರಜ್ಞಾನವಾಗಿ ಇಷ್ಟು ಮುಂದುವರಿದಿರುವ ಇಂದಿನ ಸನ್ನಿವೇಶದಲ್ಲಿ ಜಾತಿ ತಾರತಮ್ಯ ಇನ್ನೂ ಹಳ್ಳಿ ಪ್ರದೇಶಗಳಲ್ಲಿ ಜೀವಂತವಾಗಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.

ಈ ಬಗ್ಗೆ ಮಾತನಾಡಿರುವ ಸಲೂನ್ ಮಾಲಿಕ ಮಲ್ಲಿಕಾರ್ಜುನ ಶೆಟ್ಟಿ, ನನಗೆ ಹೀಗೆ ಆಗುತ್ತಿರುವುದು ಇದು ಮೂರನೇ ಸಲ. ಈ ಹಿಂದೆ ಕೂಡ ನಾನು ದಂಡ ಕಟ್ಟಿದ್ದೆ. ಎಸ್ಸಿ-ಎಸ್ಟಿ ಸಮುದಾಯದವರ ಹೇರ್ ಕಟ್ಟಿಂಗ್ ಮಾಡಿದ್ದಕ್ಕೆ ಬಹಿಷ್ಕಾರ ಹಾಕಿ ದಂಡ ಕಟ್ಟುವಂತೆ ಗ್ರಾಮದ ಚನ್ನ ನಾಯಕ್ ಮತ್ತು ಇತರರು ನನಗೆ ಹಿಂಸೆ ಕೊಡುತ್ತಿದ್ದಾರೆ. 

ಈ ಹಿಂಸೆಯನ್ನು ನನಗೆ ಮತ್ತು ಕುಟುಂಬದವರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಸಮಸ್ಯೆಯನ್ನು ಬಗೆಹರಿಸದಿದ್ದರೆ ನಾವು ಕುಟುಂಬಸ್ಥರೆಲ್ಲರೂ ಅನಿವಾರ್ಯವಾಗಿ ಆತ್ಮಹತ್ಯೆ ಮಾಡಿಕೊಳ್ಳದೆ ಬೇರೆ ದಾರಿಯಿಲ್ಲ, ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದ್ದು ತಕ್ಷಣವೇ ಗ್ರಾಮದ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT