ಸೋಮಶೇಖರ್ ರೆಡ್ಡಿ 
ರಾಜ್ಯ

ಬಳ್ಳಾರಿ ಜಿಲ್ಲೆ ಇಬ್ಭಾಗದ ನೋವು ಸದಾ ಕಾಡುತ್ತದೆ: ಶಾಸಕ ಸೋಮಶೇಖರ್ ರೆಡ್ಡಿ

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಪ್ರತ್ಯೇಕವಾಗಿ ರಚಿಸುತ್ತಿರುವ ಸರ್ಕಾರದ ನಿರ್ಧಾರ ನೋವು ತಂದಿದ್ದು, ಎಂದಿಗೂ ಜಿಲ್ಲೆಯ ಇಬ್ಭಾಗದ ನೋವು ತಮ್ಮನ್ನು ಸದಾ ಕಾಡುತ್ತದೆ ಎಂದು ‌ನಗರ ಬಿಜೆಪಿ ಶಾಸಕ‌ ಜಿ.ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.

ಬಳ್ಳಾರಿ: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಪ್ರತ್ಯೇಕವಾಗಿ ರಚಿಸುತ್ತಿರುವ ಸರ್ಕಾರದ ನಿರ್ಧಾರ ನೋವು ತಂದಿದ್ದು, ಎಂದಿಗೂ ಜಿಲ್ಲೆಯ ಇಬ್ಭಾಗದ ನೋವು ತಮ್ಮನ್ನು ಸದಾ ಕಾಡುತ್ತದೆ ಎಂದು ‌ನಗರ ಬಿಜೆಪಿ ಶಾಸಕ‌ ಜಿ.ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.

ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದ ಆಡಿಯಲ್ಲಿ ನಗರದ ಮಿಲ್ಲರ್ ಪೇಟೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂಧತ್ವ ನಿಯಂತ್ರಣ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಜಯನಗರ ಜಿಲ್ಲೆ ವಿಭಜನೆ ಹೋರಾಟಕ್ಕೆ ಸಂಬಂಧಿಸಿದಂತೆ ತೀವ್ರ ಅಸಹಾಯಕತೆ ವ್ಯಕ್ತಪಡಿಸಿದ ಶಾಸಕರು, ಇತ್ತೀಚೆಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ವಿಭಜನೆ ಮಾಡದಿರುವಂತೆ ಮನವಿ ಮಾಡಲಾಗಿದೆ. ಜಿಲ್ಲೆಯು ಇಂದಲ್ಲ ನಾಳೆ ಯಾವುದೇ ಸರ್ಕಾರ ಬಂದರೂ ವಿಭಜನೆ ಆಗುವುದು ನಿಲ್ಲಲ್ಲವೆಂದು ಮುಖ್ಯಮಂತ್ರಿ ಸೇರಿ ಅನೇಕ ಹಿರಿಯ ಸಚಿವರು ಹೇಳಿದ್ದು, ಪ್ರತಿರೋಧ ಕೈಬಿಡಲು ತಿಳಿಸಿದ್ದಾರೆ ಎಂದರು.

ಬಳ್ಳಾರಿ ವಿಭಜನೆಯಾಗದೇ ಅಖಂಡವಾಗಿರಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಜಿಲ್ಲೆಯ ಎಲ್ಲಾ ಶಾಸಕರು ಬಯಸಿದರೇ ಮತ್ತೊಮ್ಮೆ ಮುಖ್ಯಮಂತ್ರಿ ಬಳಿ ನಿಯೋಗ ತೆಗೆದುಕೊಂಡು ಹೋಗುತ್ತೇನೆ ಎಂದರು.

ವಿಜಯನಗರ ಜಿಲ್ಲೆಯ ರಚನೆ ವಿರೋಧಿಸಿ ವಿವಿಧ ಸಂಘಟನೆಗಳು ನ. 26ರಂದು ಬಳ್ಳಾರಿ ಬಂದ್ ಗೆ ಕರೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸರ್ಕಾರದ ಭಾಗವಾಗಿ ನೇರವಾಗಿ ಬೆಂಬಲಿಸಲ್ಲ. ಅವರ ಬಂದ್ ಯಶಸ್ವಿಯಾಗಲಿ ಎಂದು ಆಶಿಸಿದರು.

ಜಿಲ್ಲೆಯಲ್ಲಿ ವಿಧಾನಪರಿಷತ್ ಸದಸ್ಯ ಕೊಂಡಯ್ಯ ಬಿಟ್ಟರೇ ಬೇರೆ ಯಾರು ಇಬ್ಭಾಗಕ್ಕೆ ಬೆಂಬಲಿಸಿಲ್ಲ.‌ ಸಚಿವ ಶ್ರೀರಾಮುಲು ಸಹಮತ ವ್ಯಕ್ತಪಡಿಸಿರುವುದು ಅವರು ವೈಯಕ್ತಿಕ ವಿಚಾರ ಎಂದರು.

ಮರಾಠ ನಿಗಮ ರಚನೆ ಕುರಿತು ಪ್ರತಿಕ್ರಿಯಿಸಿದ ಅವರು, ಜಾತಿಗೊಂದು ನಿಗಮ ಮಾಡುವುದು ಸರಿಯಲ್ಲ. ನಿಗಮದ ಬದಲಿಗೆ ಸರಕಾರವು ಎಲ್ಲಾ ಜಾತಿಗಳಲ್ಲಿನ ಬಡಜನರಿಗೆ ಸಹಾಯ ಮಾಡುವ ಕೆಲಸ ಮಾಡಲಿ ಎಂದರು.
ಈ ಸಂದರ್ಭದಲ್ಲಿ ಮುಖಂಡ ಶ್ರೀನಿವಾಸ್ ಮೋತ್ಕರ್ ಮತ್ತಿತರರು ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT