ಸೋಮಶೇಖರ್ ರೆಡ್ಡಿ 
ರಾಜ್ಯ

ಬಳ್ಳಾರಿ ಜಿಲ್ಲೆ ಇಬ್ಭಾಗದ ನೋವು ಸದಾ ಕಾಡುತ್ತದೆ: ಶಾಸಕ ಸೋಮಶೇಖರ್ ರೆಡ್ಡಿ

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಪ್ರತ್ಯೇಕವಾಗಿ ರಚಿಸುತ್ತಿರುವ ಸರ್ಕಾರದ ನಿರ್ಧಾರ ನೋವು ತಂದಿದ್ದು, ಎಂದಿಗೂ ಜಿಲ್ಲೆಯ ಇಬ್ಭಾಗದ ನೋವು ತಮ್ಮನ್ನು ಸದಾ ಕಾಡುತ್ತದೆ ಎಂದು ‌ನಗರ ಬಿಜೆಪಿ ಶಾಸಕ‌ ಜಿ.ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.

ಬಳ್ಳಾರಿ: ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಪ್ರತ್ಯೇಕವಾಗಿ ರಚಿಸುತ್ತಿರುವ ಸರ್ಕಾರದ ನಿರ್ಧಾರ ನೋವು ತಂದಿದ್ದು, ಎಂದಿಗೂ ಜಿಲ್ಲೆಯ ಇಬ್ಭಾಗದ ನೋವು ತಮ್ಮನ್ನು ಸದಾ ಕಾಡುತ್ತದೆ ಎಂದು ‌ನಗರ ಬಿಜೆಪಿ ಶಾಸಕ‌ ಜಿ.ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.

ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದ ಆಡಿಯಲ್ಲಿ ನಗರದ ಮಿಲ್ಲರ್ ಪೇಟೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಂಧತ್ವ ನಿಯಂತ್ರಣ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಜಯನಗರ ಜಿಲ್ಲೆ ವಿಭಜನೆ ಹೋರಾಟಕ್ಕೆ ಸಂಬಂಧಿಸಿದಂತೆ ತೀವ್ರ ಅಸಹಾಯಕತೆ ವ್ಯಕ್ತಪಡಿಸಿದ ಶಾಸಕರು, ಇತ್ತೀಚೆಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ವಿಭಜನೆ ಮಾಡದಿರುವಂತೆ ಮನವಿ ಮಾಡಲಾಗಿದೆ. ಜಿಲ್ಲೆಯು ಇಂದಲ್ಲ ನಾಳೆ ಯಾವುದೇ ಸರ್ಕಾರ ಬಂದರೂ ವಿಭಜನೆ ಆಗುವುದು ನಿಲ್ಲಲ್ಲವೆಂದು ಮುಖ್ಯಮಂತ್ರಿ ಸೇರಿ ಅನೇಕ ಹಿರಿಯ ಸಚಿವರು ಹೇಳಿದ್ದು, ಪ್ರತಿರೋಧ ಕೈಬಿಡಲು ತಿಳಿಸಿದ್ದಾರೆ ಎಂದರು.

ಬಳ್ಳಾರಿ ವಿಭಜನೆಯಾಗದೇ ಅಖಂಡವಾಗಿರಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಜಿಲ್ಲೆಯ ಎಲ್ಲಾ ಶಾಸಕರು ಬಯಸಿದರೇ ಮತ್ತೊಮ್ಮೆ ಮುಖ್ಯಮಂತ್ರಿ ಬಳಿ ನಿಯೋಗ ತೆಗೆದುಕೊಂಡು ಹೋಗುತ್ತೇನೆ ಎಂದರು.

ವಿಜಯನಗರ ಜಿಲ್ಲೆಯ ರಚನೆ ವಿರೋಧಿಸಿ ವಿವಿಧ ಸಂಘಟನೆಗಳು ನ. 26ರಂದು ಬಳ್ಳಾರಿ ಬಂದ್ ಗೆ ಕರೆ ನೀಡಿರುವುದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸರ್ಕಾರದ ಭಾಗವಾಗಿ ನೇರವಾಗಿ ಬೆಂಬಲಿಸಲ್ಲ. ಅವರ ಬಂದ್ ಯಶಸ್ವಿಯಾಗಲಿ ಎಂದು ಆಶಿಸಿದರು.

ಜಿಲ್ಲೆಯಲ್ಲಿ ವಿಧಾನಪರಿಷತ್ ಸದಸ್ಯ ಕೊಂಡಯ್ಯ ಬಿಟ್ಟರೇ ಬೇರೆ ಯಾರು ಇಬ್ಭಾಗಕ್ಕೆ ಬೆಂಬಲಿಸಿಲ್ಲ.‌ ಸಚಿವ ಶ್ರೀರಾಮುಲು ಸಹಮತ ವ್ಯಕ್ತಪಡಿಸಿರುವುದು ಅವರು ವೈಯಕ್ತಿಕ ವಿಚಾರ ಎಂದರು.

ಮರಾಠ ನಿಗಮ ರಚನೆ ಕುರಿತು ಪ್ರತಿಕ್ರಿಯಿಸಿದ ಅವರು, ಜಾತಿಗೊಂದು ನಿಗಮ ಮಾಡುವುದು ಸರಿಯಲ್ಲ. ನಿಗಮದ ಬದಲಿಗೆ ಸರಕಾರವು ಎಲ್ಲಾ ಜಾತಿಗಳಲ್ಲಿನ ಬಡಜನರಿಗೆ ಸಹಾಯ ಮಾಡುವ ಕೆಲಸ ಮಾಡಲಿ ಎಂದರು.
ಈ ಸಂದರ್ಭದಲ್ಲಿ ಮುಖಂಡ ಶ್ರೀನಿವಾಸ್ ಮೋತ್ಕರ್ ಮತ್ತಿತರರು ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT