ಸೋಮಶೇಖರ್ 
ರಾಜ್ಯ

ಪ್ರತಿ ಹಳ್ಳಿಯಲ್ಲಿ ಜನೌಷಧ ಮಳಿಗೆ ಸ್ಥಾಪನೆ: ಎಸ್.ಟಿ. ಸೋಮಶೇಖರ್

ಗ್ರಾಮೀಣ ಪ್ರದೇಶದ ಜನಾರೋಗ್ಯದ ಸಲುವಾಗಿ ಪ್ರತಿಹಳ್ಳಿಯಲ್ಲಿ ಜನೌಷಧ ಮಳಿಗೆಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸಹಕಾರ ಇಲಾಖೆ ಚಿಂತನೆ ನಡೆಸಿದೆ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ ಹೇಳಿದ್ದಾರೆ.

ವಿಜಯಪುರ: ಗ್ರಾಮೀಣ ಪ್ರದೇಶದ ಜನಾರೋಗ್ಯದ ಸಲುವಾಗಿ ಪ್ರತಿಹಳ್ಳಿಯಲ್ಲಿ ಜನೌಷಧ ಮಳಿಗೆಗಳನ್ನು ಸ್ಥಾಪಿಸುವ ನಿಟ್ಟಿನಲ್ಲಿ ಸಹಕಾರ ಇಲಾಖೆ ಚಿಂತನೆ ನಡೆಸಿದೆ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ ಹೇಳಿದ್ದಾರೆ.

ವಿಜಯಪುರ ಜಿಲ್ಲಾ ಸಹಕಾರಿ ಸಂಘಗಳ ಒಕ್ಕೂಟ ಸೇರಿದಂತೆ ವಿವಿಧ ಸಹಕಾರ ಸಂಘಗಳ ಆಶ್ರಯದಲ್ಲಿ ಜರುಗಿದ 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ರಾಜ್ಯ ಮಟ್ಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಗ್ರಾಮೀಣ ಭಾಗದಲ್ಲಿಯೇ ಹೆಚ್ಚು ಆದ್ಯತೆ ಮೇರೆಗೆ ಜನೌಷಧ ಮಳಿಗೆಗಳನ್ನು ಆರಂಭಿಸಿ ಅವರಿಗೆ ಕಡಿಮೆ ದರದಲ್ಲಿ ಔಷಧ ಪಡೆಯುವ ಸೌಲಭ್ಯವನ್ನು ಇಲಾಖೆ ಶೀಘ್ರದಲ್ಲಿಯೇ ರೂಪಿಸಿ ಅನುಷ್ಠಾನಗೊಳಿಸಲಿದೆ. ಗ್ರಾಮೀಣ ಜನತೆಗೆ ಈ ಜನೌಷಧ ಮಳಿಗೆಗಳು ವರದಾನವಾಗಲಿವೆ ಎಂದರು.

ಮೊದಲು ಸಹಕಾರ ಸಂಘಗಳ ಸಾಧನೆಯ ವಿಷಯ ಬಂದಾಗ ಗುಜರಾತ್‌, ಮಹಾರಾಷ್ಟ್ರ ರಾಜ್ಯಗಳ ಹೆಸರು ಮುಂಚೂಣಿಯಲ್ಲಿ ಇರುತ್ತಿತ್ತು. ಆದರೆ ಇದೀಗ ಕರ್ನಾಟಕ ರಾಜ್ಯವು ಸಹಕಾರ ರಂಗದಲ್ಲಿ ನಂಬರ್‌ 1 ಸ್ಥಾನದಲ್ಲಿದೆ. ರಾಷ್ಟ್ರಮಟ್ಟದಲ್ಲಿ ಸಹಕಾರ ಸಂಘಗಳ ಸಾಧನೆಯ ವಿಷಯ ಬಂದಾಗ ಕರ್ನಾಟಕದ ಸ್ಥಾನ ಅಗ್ರಗಣ್ಯವಾಗಿದೆ. ಮುಂದಿನ ಸಹಕಾರಿ ಸಪ್ತಾಹದಲ್ಲಿ ಪ್ರತಿ ಜಿಲ್ಲೆಯ ಉತ್ತಮ ಸಹಕಾರಿ ಸಂಸ್ಥೆ ಕುರಿತ ಕಿರು ಹೊತ್ತಿಗೆ ಹೊರ ತರಲು ಚಿಂತನೆ ನಡೆಸಲಾಗುತ್ತಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT