ಹುಲಿ ಮರಿಗಳ ರಕ್ಷಣೆ 
ರಾಜ್ಯ

ತಾಯಿ ಕಳೆದುಕೊಂಡು ಅನಾಥವಾಗಿದ್ದ ಎರಡು ಹುಲಿ ಮರಿಗಳ ರಕ್ಷಣೆ

ತಾಯಿ ಕಳೆದುಕೊಂಡು ಅನಾಥವಾಗಿದ್ದ ಎರಡು ಮರಿ ಹುಲಿಗಳನ್ನು ರಕ್ಷಿಸಿರುವ ಘಟನೆ ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದ ಸಿಂಗಾರಾ ಎಂಬಲ್ಲಿ ನಡೆದಿದೆ.

ಚಾಮರಾಜನಗರ: ತಾಯಿ ಕಳೆದುಕೊಂಡು ಅನಾಥವಾಗಿದ್ದ ಎರಡು ಮರಿ ಹುಲಿಗಳನ್ನು ರಕ್ಷಿಸಿರುವ ಘಟನೆ ತಮಿಳುನಾಡಿನ ಮಧುಮಲೈ ಹುಲಿ ಸಂರಕ್ಷಿತ ಪ್ರದೇಶದ ಸಿಂಗಾರಾ ಎಂಬಲ್ಲಿ ನಡೆದಿದೆ.

ಶುಕ್ರವಾರವಷ್ಟೇ ಹೆಣ್ಣು ಹುಲಿಯೊಂದು ಅಸಹಜವಾಗಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿತ್ತು. ಸಾವಿನ ತನಿಖೆ ನಡೆಸಲು ಅರಣ್ಯ ಇಲಾಖೆ ಅಧಿಕಾರಿಗಳು ಇಂದು ಸ್ಥಳಕ್ಕೆ ತೆರಳಿದ ವೇಳೆ ಎರಡು ಗಂಡು‌ ಹುಲಿ ಮರಿಗಳು ಪತ್ತೆಯಾಗಿವೆ. ತಾಯಿಯನ್ನು‌ ಕಳೆದುಕೊಂಡಿದ್ದ ಕಂಗಲಾಗಿದ್ದ ಮರಿಗಳ ಆರೈಕೆ‌ ಮಾಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇನ್ನು, ಮೃತಪಟ್ಟ ಹುಲಿಯು ವಿಷ ಹಾಕಿದ್ದ ಕಾಡುಹಂದಿ ಮಾಂಸ ತಿಂದು ಸತ್ತಿರುವ ಶಂಕೆ ವ್ಯಕ್ತವಾಗಿದೆ. ಎರಡು ತಿಂಗಳ ಹಿಂದೆಯೂ 5 ಕೆನ್ನಾಯಿಗಳು ಇದೇ ಪ್ರದೇಶದಲ್ಲಿ ವಿಷ ಪ್ರಾಷನದಿಂದ ಸಾವನ್ನಪ್ಪಿದ್ದವು‌.

ಬುಡಕಟ್ಟು ಮಹಿಳೆಯೊಬ್ಬಳು ಹುಲಿ ದಾಳಿಗೆ ಬಲಿಯಾದ ಬಳಿಕ ವಿಷಪ್ರಾಶನ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ತಿಳಿದುಬಂದಿದೆ.
-ಗುಳಿಪುರ ನಂದೀಶ್ ಎಂ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT