ಬೆಂಗಳೂರು ತಂತ್ರಜ್ಞಾನ ಸಮಾವೇಶ-2020ರಲ್ಲಿ ಡಿಸಿಎಂ ಅಶ್ವತ್ಥ್ ನಾರಾಯಣ್ ಹಾಗೂ ಅಧಿಕಾರಿಗಳು 
ರಾಜ್ಯ

ಸ್ಮಾರ್ಟ್ ಬಯೋ ಪ್ರಶಸ್ತಿ ಗಳಿಸಿದ ರಾಜ್ಯದ 5 ಸಂಸ್ಥೆಗಳು!

ಕೊರೋನಾ ಸವಾಲಿನ ನಡುವೆಯೇ ದೇಶದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಸಂಪೂರ್ಣ ವರ್ಚುವಲ್ ರೂಪದಲ್ಲಿ ನಡೆದ ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಸಮಾವೇಶ-2020 ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು,  ಸಂಪೂರ್ಣ ವರ್ಚುವಲ್ ರೂಪದಲ್ಲೇ ನಡೆದ ತಂತ್ರಜ್ಞಾನ ಶೃಂಗದಲ್ಲಿ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆಗಳನ್ನು...

ಬೆಂಗಳೂರು: ಕೊರೋನಾ ಸವಾಲಿನ ನಡುವೆಯೇ ದೇಶದ ಇತಿಹಾಸದಲ್ಲಿ ಮೊಟ್ಟಮೊದಲ ಬಾರಿಗೆ ಸಂಪೂರ್ಣ ವರ್ಚುವಲ್ ರೂಪದಲ್ಲಿ ನಡೆದ ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಸಮಾವೇಶ-2020 ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು,  ಸಂಪೂರ್ಣ ವರ್ಚುವಲ್ ರೂಪದಲ್ಲೇ ನಡೆದ ತಂತ್ರಜ್ಞಾನ ಶೃಂಗದಲ್ಲಿ ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದ ರಾಜ್ಯದ 5 ಸಂಸ್ಥೆಗಳು ಗುರುತಿಸಲ್ಪಟ್ಟಿತು. ರಾಜ್ಯದ ಈ 5 ಸಂಸ್ಥೆಗಳಿಗೆ ಉಪಮುಖ್ಯಮಂತ್ರಿ ಅಶ್ವತ್ ನಾರಾಯಣ್ ಅವರು 'ಸ್ಮಾರ್ಟ್ ಬಯೋ ಪ್ರಶಸ್ತಿಟ ಪ್ರದಾನ ಮಾಡಿದರು.

ಫೈಬ್ರೋಹೀಲ್‌ ವೂಂಡ್‌ಕೇರ್‌ ಪ್ರೈವೇಟ್‌ ಲಿಮಿಟೆಡ್‌'ಗೆ ವರ್ಷದ ನವೋದ್ಯಮ ಪ್ರಶಸ್ತಿ, ಇರ್ಬಮ್‌ ಟೆಕ್ನಾಲಜೀಸ್‌ ಸಂಸ್ಥಾಪಕ ನಿವೇದಿತ್‌ ಡೇಗೆ ವರ್ಷದ ಆವಿಷ್ಕಾರಿ ಪ್ರಶಸ್ತಿ, ಝೂಮುಟರ್‌ ಬಯಾಲಜಿಕ್ಸ್‌ ಪ್ರೈವೇಟ್‌ ಲಿಮಿಟೆಡ್‌ ಸಹ ಸಂಸ್ಥಾಪಕಿ ಕವಿತಾ ಅಯ್ಯರ್‌ ರೋಡ್ರಿಗಸ್‌ಗೆ ವರ್ಷದ ಮಹಿಳಾ ಉದ್ಯಮಿ ಪ್ರಶಸ್ತಿ, – ಷಣ್ಮುಖ ಇನ್ನೋವೇಷನ್ಸ್‌ ಪ್ರೈವೇಟ್‌ ಲಿಮಿಟೆಡ್‌ನ ಮೊಬೈಲ್‌ ಇನ್ಫೆಕ್ಷನ್‌ ಟೆಸ್ಟಿಂಗ್‌ ಅಂಡ್‌ ರಿಪೋರ್ಟಿಂಗ್‌ (ಎಂಐಟಿಆರ್‌) ಲ್ಯಾಬ್ಸ್‌'ಗೆ ಅತ್ಯುತ್ತಮ ಕೋವಿಡ್‌ ಸಂಬಂಧಿ ಉತ್ಪನ್ನ ಪ್ರಶಸ್ತಿ, ಪೌರ ಕಾರ್ಮಿಕರ ಸಮಸ್ಯೆ ಕುರಿತು ಕೆಲಸ ಮಾಡುತ್ತಿರುವ ಜಲೋದ್‌ಬಸ್ತ್'ಗೆ ಅತ್ಯುತ್ತಮ ಸಾಮಾಜಿಕ ಉದ್ಯಮ ಪ್ರಶಸ್ತಿಯನ್ನು ನೀಡಲಾಯಿತು. 

ಬೆಂಗಳೂರಿನಲ್ಲಿ ಮೂರು ದಿನಗಳ ಕಾಲ ನಡೆದ ಈ ಶಂಗವು ಬರೋಬ್ಬರಿ 2.5 ಕೋಟಿ ಮಂದಿ ದೇಶ ಹಾಗೂ ವಿದೇಶಿಗರನ್ನು ತಲುಪಿದೆ. 

ಇಂತಹದ್ದೊಂದು ಸಮಾವೇಶವನ್ನು ಸಮರ್ಪಕವಾಗಿ ಆಯೋಜಿಸಿದ ರಾಜ್ಯ ಸರ್ಕಾರದ ಕ್ಷಮತೆಗೆ ಜಿಐಎ ಮೈತ್ರಿಕೂಟದ ದೇಶಗಳು ಅಚ್ಚರಿ ವ್ಯಕ್ತಪಡಿಸಿವೆ ಎಂದು ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT