ಸಾಂಕೇತಿಕ ಚಿತ್ರ 
ರಾಜ್ಯ

ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಪೇದೆ ಸೇರಿ ಇಬ್ಬರ ಬಂಧನ 

ಕೆಎಸ್ ಆರ್ ಪಿ ಪೇದೆ ಹುದ್ದೆ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಪೇದೆ ಸೇರಿ ಇಬ್ಬರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ. 

ಬೆಂಗಳೂರು: ಕೆಎಸ್ ಆರ್ ಪಿ ಪೇದೆ ಹುದ್ದೆ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಪೇದೆ ಸೇರಿ ಇಬ್ಬರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ. 

ಶೃಂಗೇರಿ ಪೊಲೀಸ್ ಠಾಣೆಯ ಪೇದೆ ನಾಗಪ್ಪ ತುಕ್ಕಣ್ಣನವರ್ ಹಾಗೂ ಮಲ್ಲಿಕಾರ್ಜುನ್ ಬಬಲಣ್ಣನವರ್ ಬಂಧನಕ್ಕೊಳಗಾಗಿದ್ದು, ಆರೋಪಿಗಳ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹೇಳಿದ್ದಾರೆ. 

ರಾಜ್ಯದಲ್ಲಿ ಕೆಎಸ್ ಆರ್ ಪಿ ಹಾಗೂ ಐಆರ್ ಬಿ ಪೇದೆ ಹುದ್ದೆಗಳಿಗೆ ರವಿವಾರ ಪರೀಕ್ಷೆ ನಡೆಸಲಾಗುತ್ತಿತ್ತು. ಪಶ್ಚಿಮ ವಿಭಾಗದಲ್ಲಿ 8 ಪರೀಕ್ಷಾ ಕೇಂದ್ರಗಳಿದ್ದು, ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಸಂದ್ರದಲ್ಲಿನ ಜೆಎಸ್ಎಸ್ ಕಾಲೇಜಿನಲ್ಲಿ ಹಾಲಪ್ಪ ನಾರಾಯಣ ಹಲ್ಲೂರು ಎಂಬುವವರ ಬದಲಿಗೆ ಶೃಂಗೇರಿ ಠಾಣೆ ಪೇದೆ ನಾಗಪ್ಪ ತುಕ್ಕಣ್ಣನವರ್ ಪರೀಕ್ಷೆ ಬರೆಯುತ್ತಿದ್ದ.

ಅಲ್ಲದೇ ರಾಜಾಜಿನಗರದ ಎಸ್ ಜೆಆರ್ ಸಿ ಮಹಿಳಾ ಕಾಲೇಜಿನಲ್ಲಿ ಹನುಮಂತ ವಗ್ಗಣ್ಣನವರ್ ಎಂಬುವವರ ಬದಲು ಮಲ್ಲಿಕಾರ್ಜುನ್ ಬಬಲಣ್ಣನವರ್ ಪರೀಕ್ಷೆ ಬರೆಯುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಅಕ್ರಮದ ಬಗ್ಗೆ ಪೊಲೀಸ್ ನೇಮಕಾತಿ ವಿಭಾಗಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್