ಸಾಂಕೇತಿಕ ಚಿತ್ರ 
ರಾಜ್ಯ

ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಪೇದೆ ಸೇರಿ ಇಬ್ಬರ ಬಂಧನ 

ಕೆಎಸ್ ಆರ್ ಪಿ ಪೇದೆ ಹುದ್ದೆ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಪೇದೆ ಸೇರಿ ಇಬ್ಬರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ. 

ಬೆಂಗಳೂರು: ಕೆಎಸ್ ಆರ್ ಪಿ ಪೇದೆ ಹುದ್ದೆ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಬದಲಿಗೆ ಪರೀಕ್ಷೆ ಬರೆಯುತ್ತಿದ್ದ ಪೇದೆ ಸೇರಿ ಇಬ್ಬರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ. 

ಶೃಂಗೇರಿ ಪೊಲೀಸ್ ಠಾಣೆಯ ಪೇದೆ ನಾಗಪ್ಪ ತುಕ್ಕಣ್ಣನವರ್ ಹಾಗೂ ಮಲ್ಲಿಕಾರ್ಜುನ್ ಬಬಲಣ್ಣನವರ್ ಬಂಧನಕ್ಕೊಳಗಾಗಿದ್ದು, ಆರೋಪಿಗಳ ವಿರುದ್ಧ 2 ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಹೇಳಿದ್ದಾರೆ. 

ರಾಜ್ಯದಲ್ಲಿ ಕೆಎಸ್ ಆರ್ ಪಿ ಹಾಗೂ ಐಆರ್ ಬಿ ಪೇದೆ ಹುದ್ದೆಗಳಿಗೆ ರವಿವಾರ ಪರೀಕ್ಷೆ ನಡೆಸಲಾಗುತ್ತಿತ್ತು. ಪಶ್ಚಿಮ ವಿಭಾಗದಲ್ಲಿ 8 ಪರೀಕ್ಷಾ ಕೇಂದ್ರಗಳಿದ್ದು, ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಸಂದ್ರದಲ್ಲಿನ ಜೆಎಸ್ಎಸ್ ಕಾಲೇಜಿನಲ್ಲಿ ಹಾಲಪ್ಪ ನಾರಾಯಣ ಹಲ್ಲೂರು ಎಂಬುವವರ ಬದಲಿಗೆ ಶೃಂಗೇರಿ ಠಾಣೆ ಪೇದೆ ನಾಗಪ್ಪ ತುಕ್ಕಣ್ಣನವರ್ ಪರೀಕ್ಷೆ ಬರೆಯುತ್ತಿದ್ದ.

ಅಲ್ಲದೇ ರಾಜಾಜಿನಗರದ ಎಸ್ ಜೆಆರ್ ಸಿ ಮಹಿಳಾ ಕಾಲೇಜಿನಲ್ಲಿ ಹನುಮಂತ ವಗ್ಗಣ್ಣನವರ್ ಎಂಬುವವರ ಬದಲು ಮಲ್ಲಿಕಾರ್ಜುನ್ ಬಬಲಣ್ಣನವರ್ ಪರೀಕ್ಷೆ ಬರೆಯುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಿ ಬಂಧಿಸಲಾಗಿದೆ. ಅಕ್ರಮದ ಬಗ್ಗೆ ಪೊಲೀಸ್ ನೇಮಕಾತಿ ವಿಭಾಗಕ್ಕೆ ವರದಿ ಸಲ್ಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಧ್ಯಪ್ರದೇಶ ರಾಜ್ಯಸಭಾ ಚುನಾವಣೆ: ಕಾಂಗ್ರೆಸ್ ಗೆ ಅಡ್ಡ ಮತದಾನದ ಭೀತಿ; ಕೈ ಶಾಸಕರು ಬೆಂಗಳೂರಿಗೆ ಶಿಫ್ಟ್!

ಮಂಡ್ಯದಲ್ಲಿ ಮನಕಲಕುವ ಘಟನೆ: ತಂದೆ-ತಾಯಿ, ಮಗ ನಿಗೂಢ ಸಾವು; ಡೆತ್​ನೋಟ್​​ನಲ್ಲಿ ಶಕ್ತಿ ಯೋಜನೆ ಉಲ್ಲೇಖ!

‘Superhero grandma’: ಭಯಾನಕ ಭೂಕಂಪದ ನಡುವೆ ಮೊಮ್ಮಗನನ್ನು ಎದೆಯಲ್ಲಿ ಬಚ್ಚಿಟ್ಟು ರಕ್ಷಿಸಿದ ಅಜ್ಜಿ! Video ವೈರಲ್

ಶಾಸಕರ ನಕಲಿ ಸಹಿ ಸಂಗ್ರಹದ ತನಿಖೆ: ಮಮತಾ ಬ್ಯಾನರ್ಜಿಯ ಕಾಲಿಘಾಟ್ ನಿವಾಸಕ್ಕೆ ಸಿಐಡಿ ತಂಡ!

ಲಂಡನ್​ನ ಐಷಾರಾಮಿ ಅಪಾರ್ಟ್​​ಮೆಂಟ್​ನಿಂದ ಬಿದ್ದು ಭಾರತೀಯ ದಂಪತಿ, ಅವರ ಪುತ್ರ ಸಾವು!

SCROLL FOR NEXT