ರಾಜ್ಯ

ಮಡಿಕೇರಿ: ಆಂಧ್ರದಿಂದ ಕೊಡಗಿಗೆ ಅಕ್ರಮವಾಗಿ ನಕ್ಷತ್ರ ಆಮೆಗಳ ಸಾಗಾಟ ನಡೆಸಿದ್ದ ನಾಲ್ವರ ಸೆರೆ

ಆರ್‌ಎಂಸಿ ಯಾರ್ಡ್ ಬಳಿ ಕಾರ್ಯಾಚರಣೆ ನಡೆಸಿದ ವೇಳೆ ಅರಣ್ಯಾಧಿಕಾರಿಗಳು ಬೆಂಗಳೂರಿನಿಂದ ಗೋಣಿಕೊಪ್ಪಗೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪರೂಪದ ಜಾತಿಯ ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಈ ಸಂಬಂಧ ನಾಲ್ವರು ಅಕ್ರಮ ಬೇಟೆಗಾರರನ್ನು ಬಂಧಿಸಲಾಗಿದೆ.

ಮಡಿಕೇರಿ: ಆರ್‌ಎಂಸಿ ಯಾರ್ಡ್ ಬಳಿ ಕಾರ್ಯಾಚರಣೆ ನಡೆಸಿದ ವೇಳೆ ಅರಣ್ಯಾಧಿಕಾರಿಗಳು ಬೆಂಗಳೂರಿನಿಂದ ಗೋಣಿಕೊಪ್ಪಗೆ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಪರೂಪದ ಜಾತಿಯ ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಈ ಸಂಬಂಧ ನಾಲ್ವರು ಅಕ್ರಮ ಬೇಟೆಗಾರರನ್ನು ಬಂಧಿಸಲಾಗಿದೆ.

ಬಂಧಿತರನ್ನು ಕರ್ನೂಲ್ ಜಿಲ್ಲೆಯ ಮಂಚಾಲ ಗ್ರಾಮದ ಟಿ ಲಕ್ಷ್ಮಣ್ದ ಮಂಡಲಂನ ಆರ್.ಲಕ್ಷ್ಮೀನಾರಾಯಣ, ತೆಲಂಗಾಣದ ಮೆಹಬೂಬ್ ನಗರ ಬಳಿಯ ಸಿಂಧನೂರ್ ಗ್ರಾಮದ ತೆಲುಗರ  ಇ ತಿಮ್ಮಪ್ಪ ಮತ್ತು ಬೆಂಗಳೂರಿನ ಎಸ್ ನಾಗೇಶ್ ಎಂದು ಗುರುತಿಸಲಾಗಿದೆ.

ಅಳಿವಿನಂಚಿನಲ್ಲಿರುವ ಜೀವಿಯಾದ ನಕ್ಷತ್ರ ಆಮೆಯನ್ನು ಆಂಧ್ರಪ್ರದೇಶದಿಂದ ಕೊಡಗಿಗೆ ಅಕ್ರಮ ಸಾಗಾಟ ನಡೆಸಲಾಗುತ್ತಿತ್ತು.

ಆರೋಪಿಗಳನ್ನು ಪೊನ್ನಂಪೆಟೆ ಸಿವಿಲ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು 15 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿಡಲಾಗಿದೆ. ಮಡಿಕೇರಿ ಸಿಐಡಿ ಪೊಲೀಸ್ ಅರಣ್ಯ ಘಟಕ ಅಧೀಕ್ಷಕ ಸುರೇಶ್ ಬಾಬು ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್‌: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT