ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ 
ರಾಜ್ಯ

ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 24/7 ಕಾರ್ಯನಿರ್ವಹಿಸುವಂತೆ ಯೋಜನೆ: ಸಚಿವ ಸುಧಾಕರ್

ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 24/7 ಕಾರ್ಯನಿರ್ವಹಿಸುವಂತೆ ಯೋಜನೆ ರೂಪಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಸ್ಪಷ್ಟಪಡಿಸಿದರು. 

ಬೆಂಗಳೂರು: ಮುಂಬರುವ ದಿನಗಳಲ್ಲಿ ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು 24/7 ಕಾರ್ಯನಿರ್ವಹಿಸುವಂತೆ ಯೋಜನೆ ರೂಪಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಸ್ಪಷ್ಟಪಡಿಸಿದರು. 

ನಗರದ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ಜನವರಿಯಿಂದ ಎಲ್ಲಾ ರೀತಿಯ ಪರೀಕ್ಷೆ ಸಂಪೂರ್ಣ ಉಚಿತವಾಗಿ ನೀಡಲು ಸರ್ಕಾರ ನಿರ್ಧರಿಸಿದೆ, ಸಿಟಿ ಸ್ಕ್ಯಾನ್, ರಕ್ತಪರೀಕ್ಷೆಗಳು ಎಲ್ಲವೂ ಉಚಿತವಾಗಿ ಮಾಡಲಾಗುವುದು. ಚೀಟಿ ರಹಿತ ವ್ಯವಸ್ಥೆಯನ್ನು ಜಾರಿಗೆ ತರಲು ಎಲ್ಲಾ ಸೌಲಭ್ಯಗಳನ್ನು ಈಗಾಗಲೇ ಒದಗಿಸಲಾಗಿದೆ. ಯಾವುದೇ ಔಷಧಿ ಅಗತ್ಯವಿದ್ದರೂ ಸರ್ಕಾರ ಪೂರೈಸುತ್ತಿದೆ ಎಂದು ಹೇಳಿದ್ದಾರೆ. 

ಜನಸಂಖ್ಯೆ ಆಧರಿಸಿ ಹೆಚ್ಚುವರಿ ಪ್ರಾಥಮಿಕ ಆರೋಗ್ಯ ಕೇಂದ್ರ ಆರಂಭ, ಆ್ಯಂಬುಲೆನ್ಸ್ ಸೇವೆ ಬಲವರ್ಧನೆ ಮಾಡಲು ತೀರ್ಮಾನಿಸಲಾಗಿದೆ. ಶುಚಿತ್ವ ಇರುವುದಿಲ್ಲ ಎಂಬ ದೊಡ್ಡ ಆರೋಪ ಸರ್ಕಾರಿ ಆಸ್ಪತ್ರೆಗಳ ಮೇಲಿದೆ. ವಿಷಯ ಪರಿಣಿತಿ ಜತೆಗೆ ಆಡಳಿತಾತ್ಮಕ ಕೌಶಲ್ಯವನ್ನು ವೈದ್ಯರು ರೂಢಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. 

ಸರ್ಕಾರಿ ಖಾಸಗಿ ಆಸ್ಪತ್ರೆಗಳಿಗಿಂತ ಹೆಚ್ಚು ಹಣ ಖರ್ಚು ಮಾಡುತ್ತದೆ. ಆದಾಗ್ಯೂ ಜನರಿಗೆ ಏಕೆ ಉತ್ತಮ ಸೌಕರ್ಯಗಳು ಸಿಗುತ್ತಿಲ್ಲ ಎಂಬುದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ. ಆತ್ಮಸಾಕ್ಷಿಗೆ ಅನುಗುಣವಾಗಿ ಕಾರ್ಯನಿರ್ವಹಿಸಿದರೆ ಖಾಸಗಿ ಆಸ್ಪತ್ರೆಗಿಂತ ಉತ್ತಮ ಸೇವೆ ನೀಡುವುದು ಸಾಧ್ಯವಾಗಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ