ಸಾಂದರ್ಭಿಕ ಚಿತ್ರ 
ರಾಜ್ಯ

ಆರ್ಎಸ್ಎಸ್ ಎಂದಿಗೂ ಅಂತರ ಧರ್ಮೀಯ ವಿವಾಹ ವಿರೋಧಿಸುವುದಿಲ್ಲ: ಸಂಘದ ಮಾಧ್ಯಮ ತಂಡ ಸದಸ್ಯ 

ಅಂತರ ಧರ್ಮೀಯ ವಿವಾಹಗಳು ವಿಶೇಷ ವಿವಾಹ ಕಾಯ್ದೆಯಡಿ ದಾಖಲಾಗಬೇಕಾಗುತ್ತದೆ, ಈ ಮೂಲಕ ಮಹಿಳೆಯರಿಗೆ ಆಸ್ತಿಯಲ್ಲಿ ಸೇರಿದಂತೆ ಸಮಾನ ಹಕ್ಕುಗಳು ದೊರೆಯುತ್ತವೆ ಎಂದು ಆರ್ ಎಸ್ ಎಸ್ ಮಾಧ್ಯಮ ತಂಡದ ಸದಸ್ಯರೊಬ್ಬರು ಹೇಳುತ್ತಾರೆ.

ಬೆಂಗಳೂರು: ಅಂತರ ಧರ್ಮೀಯ ವಿವಾಹಗಳು ವಿಶೇಷ ವಿವಾಹ ಕಾಯ್ದೆಯಡಿ ದಾಖಲಾಗಬೇಕಾಗುತ್ತದೆ, ಈ ಮೂಲಕ ಮಹಿಳೆಯರಿಗೆ ಆಸ್ತಿಯಲ್ಲಿ ಸೇರಿದಂತೆ ಸಮಾನ ಹಕ್ಕುಗಳು ದೊರೆಯುತ್ತವೆ ಎಂದು ಆರ್ ಎಸ್ ಎಸ್ ಮಾಧ್ಯಮ ತಂಡದ ಸದಸ್ಯರೊಬ್ಬರು ಹೇಳುತ್ತಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ ಅಂತರಧರ್ಮೀಯ ವಿವಾಹಕ್ಕೆ ವಿರುದ್ಧವಾಗಿ ಇಲ್ಲ, ಆದರೆ ಮದುವೆ ಹೆಸರಿನಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ಶೋಷಣೆಗೆ ವಿರುದ್ಧವಾಗಿದೆ. ಅಂತರಧರ್ಮೀಯ ವಿವಾಹವಾದ ಮಹಿಳೆಯರನ್ನು ಒತ್ತಾಯಪೂರ್ವಕವಾಗಿ ಪತಿಯ ಧರ್ಮಕ್ಕೆ ಮತಾಂತರ ಮಾಡಿಕೊಂಡು ಅವರ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಆರ್ ಎಸ್ ಎಸ್ ರಾಷ್ಟ್ರೀಯ ಮಾಧ್ಯಮ ತಂಡದ ಸದಸ್ಯ ರತನ್ ಶಾರದಾ ಹೇಳಿದ್ದಾರೆ. ಇವರು ಲವ್ ಜಿಹಾದ್ ಎಂಬ ವಿವಾದಾತ್ಮಕ ವಿಷಯದ ಮೇಲೆ ಆರ್ ಎಸ್ಎಸ್ 360 ಪುಸ್ತಕದ ಲೇಖಕ ಕೂಡ ಆಗಿದ್ದಾರೆ.

ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ ಅವರು, ಅಂತರಧರ್ಮೀಯ ಮದುವೆಯಲ್ಲಿ ಮಹಿಳೆಯರು ಮೋಸ ಹೋದ ಪ್ರಕರಣಗಳು ಸಾಕಷ್ಟಿವೆ. ಹಲವು ಮದುವೆಗಳು ಇಂತವು ಯೋಜಿತ ಧರ್ಮ ಮತಾಂತರಗಳು. ವೈಯಕ್ತಿಕ ಕಾನೂನುಗಳನ್ನು ಹತ್ತಿಕ್ಕುವ ಸಾಮಾನ್ಯ ಕಾನೂನುಗಳು ನಮ್ಮಲ್ಲಿ ಬಲಿಷ್ಠವಾಗಬೇಕು ಎಂದರು.

ಜಾತಿ, ಧರ್ಮವನ್ನು ಬದಿಗೊತ್ತಿ ಅಭಿವೃದ್ಧಿಪರ ಮತ ಹಾಕಿದ್ದಾರೆ ಎಂಬುದನ್ನು ಇತ್ತೀಚಿನ ಬಿಹಾರ ಚುನಾವಣೆ ಸಾಬೀತುಪಡಿಸಿದೆ. ಜಾತ್ಯಾತೀತ ಪಕ್ಷಗಳ ರಾಜಕೀಯವನ್ನು ಜನರು ನೋಡಿ ತೀರ್ಮಾನ ಕೊಟ್ಟಿದ್ದು ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಕೂಡ ಅದು ಸಾಬೀತಾಗಲಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT