ಯಡಿಯೂರಪ್ಪ 
ರಾಜ್ಯ

ಅಸ್ತಿತ್ವದಲ್ಲಿರುವ ಮಂಡಳಿಗಳಿಗೆ ಮೊದಲು ಅನುದಾನ ನೀಡಿ: ಪಿಆರ್ ರಮೇಶ್ ಆಗ್ರಹ

ವಿವಿಧ ಸಮುದಾಯಗಳ ಅಭಿವೃದ್ಧಿ ಮಂಡಳಿಗಳನ್ನು ರಚಿಸಿ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿದೆ, ಸರ್ಕಾರದ ಈ ನಿರ್ಧಾರವನ್ನು ಕಾಂಗ್ರೆಸ್ ಎಂಎಲ್ ಸಿ ಪಿಆರ್ ರಮೇಶ್ ಖಂಡಿಸಿದ್ದಾರೆ.

ಮಂಗಳೂರು: ವಿವಿಧ ಸಮುದಾಯಗಳ ಅಭಿವೃದ್ಧಿ ಮಂಡಳಿಗಳನ್ನು ರಚಿಸಿ ಸರ್ಕಾರ ಇತ್ತೀಚೆಗೆ ಆದೇಶ ಹೊರಡಿಸಿದೆ, ಸರ್ಕಾರದ ಈ ನಿರ್ಧಾರವನ್ನು ಕಾಂಗ್ರೆಸ್ ಎಂಎಲ್ ಸಿ ಪಿಆರ್ ರಮೇಶ್ ಖಂಡಿಸಿದ್ದಾರೆ.

ಮೊದಲು ಅಸ್ತಿತ್ವದಲ್ಲಿರುವ ವಿವಿಧ ಅಭಿವೃದ್ಧಿ ಮಂಡಳಿಗಳಿಗೆ ಮೊದಲು ಅನುದಾನ ನೀಡಿ, ನಂತರ ಹೊಸ ಮಂಡಳಿ ಸ್ಥಾಪನೆ ಮಾಡಿ ಎಂದು ರಮೇಶ್ ಆಗ್ರಹಿಸಿದ್ದಾರೆ. ರಾಜಕೀಯ ಉದ್ದೇಶಕ್ಕಾಗಿ ರಾಜ್ಯ ಸರ್ಕಾರ ಕೆಲವು ಸಮುದಾಯಗಳ ಅಭಿವೃದ್ಧಿ ಮಂಡಳಿ ರಚಿಸುತ್ತಿರುವುದು ದುರಾದೃಷ್ಟಕರ ಎಂದಿದ್ದಾರೆ.

ರಾಜಕೀಯವಾಗಿ, ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮಂಡಳಿ ರಚಿಸಬೇಕೆಂದು ಅವರು ಒತ್ತಾಯಿಸಿದ್ದಾರೆ. ಹಿಂದುಳಿದ ವರ್ಗಗಳಾದ ಸವಿತಾ ಸಮಾಜ, ಕುಂಬಾರ ಮತ್ತಿತರ ಸಮುದಾಯಗಳ ಅಭಿವೃದ್ಧಿಗೆ ದೀರ್ಘಾವದಿ ಯೋಜನೆ ಹಾಕಿಕೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ 400 ಕೋಟಿ ರು ಅನುದಾನ ನೀಡಲಾಗಿತ್ತು, ಜೊತೆಗೆ ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು ಎಂದು ಹೇಳಿದ್ದಾರೆ.

ಸರ್ಕಾರ ಕಡ್ಡಾಯವಾಗಿ ಹಿಂದುಳಿದ ವರ್ಗಗಳನ್ನು ಗುರುತಿಸಿ, ಅವುಗಳ ಅಭಿವೃದ್ಧಿಗೆ ಸೂಕ್ತ ಕ್ರಮ ಕೈಗೊಳ್ಳಬೇಕು. ತಿಗಳರ ಅಭಿವೃದ್ಧಿ ಮಂಡಳಿ ರಚಿಸಬೇಕೆಂದು ಅವರು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT