ಹೈಕೋರ್ಟ್ 
ರಾಜ್ಯ

ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳು: ವಿಶೇಷ ನ್ಯಾಯಾಲಯ ಸ್ಥಾಪನೆಗೆ ಹೈಕೋರ್ಟ್ ಸೂಚನೆ

ಶಾಸಕರು, ಸಂಸದರ ವಿರುದ್ಧದ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಲು ತಕ್ಷಣವೇ ಮತ್ತೊಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ಸೋಮವಾರ ಮೌಖಿಕವಾಗಿ ರಾಜ್ಯಸರ್ಕಾರಕ್ಕೆ ಸೂಚಿಸಿದೆ.

ಬೆಂಗಳೂರು: ಶಾಸಕರು, ಸಂಸದರ ವಿರುದ್ಧದ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ವಿಚಾರಣೆಗೆ ಒಳಪಡಿಸಲು ತಕ್ಷಣವೇ ಮತ್ತೊಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ನಿರ್ಧಾರ ಕೈಗೊಳ್ಳುವಂತೆ ಹೈಕೋರ್ಟ್ ಸೋಮವಾರ ಮೌಖಿಕವಾಗಿ ರಾಜ್ಯಸರ್ಕಾರಕ್ಕೆ ಸೂಚಿಸಿದೆ.

 ಬಾಕಿ ಇರುವ ಪ್ರಕರಣಗಳಿಗೆ ನೇಮಕಗೊಂಡ ಪ್ರಾಸಿಕ್ಯೂಟರ್‌ಗಳನ್ನು ದಾಖಲೆಯನ್ನು ವಿಶೇಷ ನ್ಯಾಯಾಲಯದ ಮುಂದೆ ಇಡುವಂತೆ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಒಕಾ ಮತ್ತು ನ್ಯಾಯಾಧೀಶ ಅಸೋಕ್ ಕಿನಾಗಿ ಅವರನ್ನೊಳಗೊಂಡ ವಿಭಾಗೀಯ ಪೀಠ, ರಾಜ್ಯಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಸುಪ್ರೀಂ ಕೋರ್ಟ್‌ನ ನಿರ್ದೇಶನಗಳ ಆಧಾರದ ಮೇಲೆ ಸುಯೋ ಮೋಟು ಪಿಐಎಲ್ ವಿಚಾರಣೆ ನಡೆಸಿದ ನ್ಯಾಯಪೀಠ, ಇದು ಸಾಕ್ಷಿಗಳ ಸಂರಕ್ಷಣಾ ಯೋಜನೆ 2018 ರ ಅನುಷ್ಠಾನವನ್ನು ಪರಿಸಬೇಕಾಗಿದೆ ಅಲ್ಲದೇ,  ಮುಂದಿನ ವಿಚಾರಣೆ ಇರುವ ಡಿಸೆಂಬರ್ 1 ರಂದು ವಿಶೇಷ ನ್ಯಾಯಾಲಯದ ಮುಂದೆ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕಾಗಿದೆ ಎಂದು ಹೇಳಿತು.

ಬಾಕಿ ಇರುವ ಪ್ರಕರಣಗಳ ಸಂಖ್ಯೆಯನ್ನು ಆಧರಿಸಿ ಶೀಘ್ರವಾಗಿ ವಿಲೇವಾರಿ ಮಾಡಲು ಇನ್ನೂ ಒಂದು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸುವ ಕುರಿತು ಪರಿಶೀಲನೆ ನಡೆಸಬೇಕೆಂದು ಸುಪ್ರೀಂಕೋರ್ಟ್  ರಾಜ್ಯ ಸರ್ಕಾರಗಳಿಗೆ ಸೂಚಿಸಿತ್ತು. ಈ ಸಂಬಂಧ ಕೂಡಲೇ ನಿರ್ಧಾರ ತೆಗೆದುಕೊಳ್ಳುವಂತೆ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಕೋರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ