ಸಂಗ್ರಹ ಚಿತ್ರ 
ರಾಜ್ಯ

ದಾಖಲೆಗಾಗಿ ಪ್ರಾಣಿ ಹಿಂಸೆ: 14 ಟನ್ ಕಬ್ಬು ಎಳೆಸಿದ ಜೊಡೆತ್ತುಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲು!

ದಾಖಲೆಗಾಗಿ ಪ್ರಾಣಿ ಹಿಂಸೆ ಮಾಡಿದ ಆರೋಪದ ಮೇರೆಗೆ 14 ಟನ್ ಕಬ್ಬು ಎಳೆಸಿದ ಜೊಡೆತ್ತುಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಮೈಸೂರು: ದಾಖಲೆಗಾಗಿ ಪ್ರಾಣಿ ಹಿಂಸೆ ಮಾಡಿದ ಆರೋಪದ ಮೇರೆಗೆ 14 ಟನ್ ಕಬ್ಬು ಎಳೆಸಿದ ಜೊಡೆತ್ತುಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.

ಹೌದು.. ಇತ್ತೀಚೆಗೆ ಮಂಡ್ಯದಲ್ಲಿ ಯುವಕರ ತಂಡವೊಂದು ಎತ್ತಿನ ಗಾಡಿಯಲ್ಲಿ ಬರೊಬ್ಬರಿ 14.55 ಟನ್ ಕಬ್ಬು ತುಂಬಿ ಅವುಗಳನ್ನು ಎತ್ತುಗಳ ಮೂಲಕ ಸುಮಾರು 3 ಕಿ.ಮೀ ದೂರದವರೆಗೂ ಎಳೆಸಿದ್ದರು. ಮಂಡ್ಯ ತಾಲೂಕಿನ ಹೆಚ್.ಮಲ್ಲಿಗೆರೆ ಗ್ರಾಮದ ವಿನಾಯಕ ಗೆಳೆಯ ಬಳಗದ ಯುವಕರು ದಾಖಲೆ ನಿರ್ಮಾಣಕ್ಕಾಗಿ  ಈ ಕಾರ್ಯ ಮಾಡಿದ್ದರು. ಈ ವಿಡಿಯೋ ವೈರಲ್ ಕೂಡ ಆಗಿತ್ತು. ಆದರೆ ಯುವಕರ ಇದೇ ಸಾಹಸ ಪ್ರಾಣಿ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ವಿಡಿಯೋ ವೈರಲ್ ಆಗುತ್ತಲೇ ಮಂಡ್ಯ ಪೊಲೀಸ್ ಠಾಣೆಯಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ ಜೊಡೆತ್ತುಗಳ ಮಾಲೀಕರ ವಿರುದ್ಧ ಸ್ವಯಂ ಪ್ರೇರಿತ ದೂರು  ದಾಖಲಿಸಿಕೊಳ್ಳಲಾಗಿದೆ. ಈ ಜೋಡೆತ್ತುಗಳನ್ನು ಶರತ್ ಅವರು ಕಳೆದ ತಿಂಗಳಷ್ಟೇ 2.90 ಲಕ್ಷ ರೂ.ಗೆ ಖರೀದಿ ಮಾಡಿದ್ದರು.

ಮೂಲಗಳ ಪ್ರಕಾರ ಮಂಡ್ಯ ಜಿಲ್ಲೆಯಲ್ಲಿ ಇಲ್ಲಿವರೆಗೆ ಒಂದು ಗಾಡಿಗೆ 12 ಟನ್ ತುಂಬುಲಾಗಿತ್ತು. ಆದರೆ ಮಲ್ಲಿಗೆರೆಯ ಯುವಕರ ತಂಡ 14.55 ಟನ್ ಕಬ್ಬು ತುಂಬಿ ಹಳೆಯ ದಾಖಲೆಯನ್ನು ಬ್ರೇಕ್ ಮಾಡಿದ್ದಾರೆ. ಇಷ್ಟು ಟನ್ ಕಬ್ಬು ತುಂಬಿದ ಎತ್ತಿನ ಗಾಡಿಯನ್ನು ಹುರುಗಲವಾಡಿ ಗ್ರಾಮದ ಶರತ್ ಅವರ ಜೋಡೆತ್ತುಗಳು  ಮೂರು ಕಿಲೋಮೀಟರ್ ಎಳೆದು ತಂದಿದ್ದವು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT