ರಾಜ್ಯ

ಕಂದಾಯ ಗುಪ್ತಚರ ಅಧಿಕಾರಿಗಳ ಕಾರ್ಯಾಚರಣೆ: ಕೆಐಎನಲ್ಲಿ ನಾಲ್ವರ ಬಂಧನ, 1.3 ಕೋಟಿ ರೂ. ಮೌಲ್ಯದ ಚಿನ್ನ ವಶ

ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಲ್ವರನ್ನು ಬಂಧಿಸಿ 1.3 ಕೋಟಿ ರೂ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಲ್ವರನ್ನು ಬಂಧಿಸಿ 1.3 ಕೋಟಿ ರೂ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಚಿನ್ನದ ಕಳ್ಳಸಾಗಣೆ ಬಗ್ಗೆ ಸುಳಿವು ಸಿಕ್ಕ ಬೆನ್ನಲ್ಲೇ ಡಿಆರ್‌ಐ ಅಧಿಕಾರಿಗಳು ದುಬೈನಿಂದ ಬೆಂಗಳೂರಿಗೆ ಆಗಮಿಸಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಟಿವಿ ಸ್ಪೀಕರ್ ಪೆಟ್ಟಿಗೆಯಲ್ಲಿಟ್ಟು ಅವರು ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿರುವುದಾಗಿ ತಿಳಿದುಬಂದಿದೆ.

ಬಂಧಿತರಲ್ಲಿ ತಮಿಳುನಾಡಿನ ಮೂವರು ಮತ್ತು ಪಶ್ಚಿಮ ಬಂಗಾಳದ ಓರ್ವನಿದ್ದಾನೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದುಬೈನಿಂದ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ನಾಲ್ವರ ಪೈಕಿ ಮೂವರು ಎಲ್ಇಡಿ ಟಿವಿ ಸೆಟ್ ಮತ್ತು ಇನ್ನೊಬ್ಬರು ಇತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಸಾಗಿಸುತ್ತಿದ್ದರು. ಅಧಿಕಾರಿಗಳಿಗೆ ಸಂದೇಹವಿದ್ದ ಹಿನ್ನೆಲೆ ಅವರನ್ನು ಪರಿಶೀಲಿಸಿದಾಗ ಟಿ ವಿ ಸೆಟ್ ಗಳಲ್ಲಿ ಚಿನ್ನದ ಬಿಸ್ಕತ್ತುಗಳು ಕಂಡುಬಂದಿವೆ.. ಬಂಧಿತರು ತಮಿಳುನಾಡಿನಲ್ಲೂ ಚಿನ್ನದ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದಾರೆ ಮತ್ತು ಅವರಿಗೆ ಅಂತರರಾಷ್ಟ್ರೀಯ ಸಂಪರ್ಕವಿದೆ ಎಂದು ಶಂಕಿಸಲಾಗಿದೆ. ಲಾಕ್‌ಡೌನ್ ನಂತರ ಪತ್ತೆಯಾದ ದೊಡ್ಡ ಪ್ರಮಾಣದ ಚಿನ್ನ ಕಳ್ಳಸಾಗಣೆ ಪ್ರಕರಣ ಇದು ಎಂದು ಅಧಿಕಾರಿಗಳು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT