ಎನ್.ಭೃಂಗೀಶ್ 
ರಾಜ್ಯ

ಸಿಎಂ ಮಾಧ್ಯಮ ಸಲಹೆಗಾರರಾಗಿ ಎನ್.ಭೃಂಗೀಶ್, ಹಟ್ಟಿ ಚಿನ್ನದ ಗಣಿ ನಿಗಮ ಅಧ್ಯಕ್ಷರಾಗಿ ಮಾನಪ್ಪ ವಜ್ಜಲ್ ನೇಮಕ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿ ಎನ್.ಭೃಂಗೀಶ್ ಅವರನ್ನು ನೇಮಕ ಮಾಡಲಾಗಿದೆ. 

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾಧ್ಯಮ ಸಲಹೆಗಾರರಾಗಿ ಎನ್.ಭೃಂಗೀಶ್ ಅವರನ್ನು ನೇಮಕ ಮಾಡಲಾಗಿದೆ. 

ಬಿಜೆಪಿ ನೇತೃತ್ವದ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದ ಬಳಿಕ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ನೇಮಕಗೊಂಡಿದ್ದ ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಅವರು ಕೆಲ ದಿನಗಳ ಹಿಂದಷ್ಟೇ ರಾಜೀನಾಮೆ ನೀಡಿದ್ದರು. 

ಮಹದೇವ್ ಪ್ರಕಾಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿವೃತ್ತ ನಿರ್ದೇಶಕ ಎನ್.ಭೃಂಗೀಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸುವಂತೆ ಸಿಎಂ ಮುಖ್ಯ ಕಾರ್ಯದರ್ಶಿಗೆ ಯಡಿಯೂರಪ್ಪ ಅವರು ಮಂಗಳವಾರ ಸೂಚಿಸಿದ್ದರು. 

ಇದರಂತೆ ಎನ್.ಭೃಂಗೀಶ್ ಅವರನ್ನು ಕೂಡಲೇ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರನ್ನಾಗಿ ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದೆ. 

ಇದೇ ವೇಳೆ ಮಾಜಿ ಶಾಸಕ ಮಾನಪ್ಪ ಡಿ.ವಜ್ಜಲ್ ರನ್ನು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷರನ್ನಾಗಿ, ಹಾಗೂ ಎಸ್.ಲಿಂಗಮೂರ್ತಿ ಇವರನ್ನು ಕರ್ನಾಟಕ ರಾಜ್ಯ ಮಿನರಲ್ ಕಾರ್ಪುರೇಷನ್ ಅಧ್ಯಕ್ಷರಾಗಿ ನೇಮಕ ಗೊಳಿಸಿ ಮುಖ್ಯಮಂತ್ರಿ ಆದೇಶ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT