ಹೈಕೋರ್ಟ್ 
ರಾಜ್ಯ

ಕೋವಿಡ್-19 ನಿಯಮ ಉಲ್ಲಂಘನೆ: ರಾಜಕೀಯ ಪಕ್ಷಗಳಿಗೆ ಹೈಕೋರ್ಟ್ ನೊಟೀಸ್

ಪ್ರತಿಭಟನೆ, ರ್ಯಾಲಿಗಳ ಸಮಯದಲ್ಲಿ ಕೋವಿಡ್-19 ನಿಯಮ ಉಲ್ಲಂಘಟನೆಯಾಗುತ್ತಿರುವ ಬಗ್ಗೆ ಮತ್ತು ಬರುವ ಡಿಸೆಂಬರ್ 5ರಂದು ನಡೆಸಲು ಉದ್ದೇಶಿಸಿರುವ ರಾಜ್ಯ ಬಂದ್ ವೇಳೆ ಕೋವಿಡ್-19 ನಿಯಮ ಉಲ್ಲಂಘನೆಯಾಗದಂತೆ ಹೇಗೆ ನೋಡಿಕೊಳ್ಳುತ್ತೀರೆಂದು ವಿವರಣೆ ಕೋರಿ ಹೈಕೋರ್ಟ್ ರಾಜಕೀಯ ಪಕ್ಷಗಳಿಗೆ ನೊಟೀಸ್ ನೀಡಿದೆ.

ಬೆಂಗಳೂರು: ಪ್ರತಿಭಟನೆ, ರ್ಯಾಲಿಗಳ ಸಮಯದಲ್ಲಿ ಕೋವಿಡ್-19 ನಿಯಮ ಉಲ್ಲಂಘಟನೆಯಾಗುತ್ತಿರುವ ಬಗ್ಗೆ ಮತ್ತು ಬರುವ ಡಿಸೆಂಬರ್ 5ರಂದು ನಡೆಸಲು ಉದ್ದೇಶಿಸಿರುವ ರಾಜ್ಯ ಬಂದ್ ವೇಳೆ ಕೋವಿಡ್-19 ನಿಯಮ ಉಲ್ಲಂಘನೆಯಾಗದಂತೆ ಹೇಗೆ ನೋಡಿಕೊಳ್ಳುತ್ತೀರೆಂದು ವಿವರಣೆ ಕೋರಿ ಹೈಕೋರ್ಟ್ ರಾಜಕೀಯ ಪಕ್ಷಗಳಿಗೆ ನೊಟೀಸ್ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ನೇತೃತ್ವದ ವಿಭಾಗೀಯ ಪೀಠ, ಡಿಸೆಂಬರ್ 2ರೊಳಗೆ ಪ್ರತಿಕ್ರಿಯೆ ನೀಡುವಂತೆ ಕೂಡ ರಾಜಕೀಯ ಪಕ್ಷಗಳಿಗೆ ಸೂಚಿಸಿದೆ. ಮುಂದಿನ ವಿಚಾರಣೆ ಅಂದೇ ನಡೆಯಲಿದೆ. 
ರಾಜ್ಯ ಬಂದ್ ವೇಳೆ ನಡೆಯುವ ರ್ಯಾಲಿಗಳಲ್ಲಿ ಕೋವಿಡ್-19 ನಿಯಮಗಳನ್ನು ಕಾರ್ಯಕರ್ತರು ಪಾಲಿಸುತ್ತಾರೆಯೇ ಎಂದು ಸ್ಪಷ್ಟನೆ ನೀಡಬೇಕೆಂದು ಹೈಕೋರ್ಟ್ ಸೂಚಿಸಿದೆ. ಬಿಜೆಪಿ, ಸಿಪಿಎಂ, ಕಾಂಗ್ರೆಸ್, ಜೆಡಿಎಸ್, ಕನ್ನಡ ಚಳವಳಿ ವಾಟಾಳ್ ಪಕ್ಷಗಳಿಗೆ ಹೈಕೋರ್ಟ್ ನೊಟೀಸ್ ಜಾರಿ ಮಾಡಿದೆ. 

ಲೆಟ್ಝಿಕಿಟ್ ಫೌಂಡೇಶನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಿ ನ್ಯಾಯಪೀಠ ರಾಜಕೀಯ ಪಕ್ಷಗಳಿಗೆ ನೊಟೀಸ್ ನೀಡಿದ್ದು, ಮರಾಠಾ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದು ಅದಕ್ಕೆ ವಿವಿಧ ರಾಜಕೀಯ ಪಕ್ಷಗಳ ಬೆಂಬಲವಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT