ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹ ಸಮಾರಂಭ 
ರಾಜ್ಯ

ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹಕ್ಕೆ ಗಣ್ಯರ ದಂಡು: ಸೋನಿಯಾ, ರಾಹುಲ್ ಗಾಂಧಿ ಭಾಗಿ ಸಾಧ್ಯತೆ

ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ. ಶಿವಕುಮಾರ್‌ ಪುತ್ರಿ ಡಾ.ಹಿತಾ ಅವರ ವಿವಾಹ ಗೋವಾದ ಲೀಲಾ ಪ್ಯಾಲೇಸ್‌ ಹೋಟೆಲ್‌ನಲ್ಲಿ ನ. 27ರಂದು ಅದ್ಧೂರಿಯಾಗಿ ನಡೆಯಲಿದೆ.

ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ. ಶಿವಕುಮಾರ್‌ ಪುತ್ರಿ ಡಾ.ಹಿತಾ ಅವರ ವಿವಾಹ ಗೋವಾದ ಲೀಲಾ ಪ್ಯಾಲೇಸ್‌ ಹೋಟೆಲ್‌ನಲ್ಲಿ ನ. 27ರಂದು ಅದ್ಧೂರಿಯಾಗಿ ನಡೆಯಲಿದೆ.

ಕಾಕತಾಳೀಯ ಎಂಬಂತೆ ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಕೂಡ ಗೋವಾದಲ್ಲಿಯೇ ಸದ್ಯ ವಾಸ್ತವ್ಯ ಹೂಡಿದ್ದು  ಶುಕ್ರವಾರ ನಡೆಯುವ ಆರತಕ್ಷತೆಯಲ್ಲಿ ಪಾಲ್ಗೋಳ್ಳುವ ಸಾಧ್ಯತೆಯಿದೆ.

ಸೋನಿಯಾ ಮತ್ತು ರಾಹುಲ್ ಗಾಂಧಿ ಅವರನ್ನು ವಿವಾಹಕ್ಕೆ ಆಮಂತ್ರಿಸಲಾಗಿದೆ. ರೆಸಾರ್ಟ್ ನಲ್ಲಿ ಉತ್ತಮ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಮೋಹನ್ ರೆಡ್ಡಿ ತಿಳಿಸಿದ್ದಾರೆ.

ಇನ್ನೂ ಮೃಣಾಲ್ ಮತ್ತು ಡಾ.ಹಿತ ಅವರ ವಿವಾಹ ಆರತಕ್ಷತೆಗೆ ಕೊರೋನಾ ಕಾರಣದಿಂದ ಕೇವಲ 500 ಗಣ್ಯರಿಗೆ  ಮಾತ್ರ ಆಹ್ವಾನ ನೀಡಲಾಗಿದೆ, ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷದ ಶಾಸಕರು ಮತ್ತು ಕನ್ನಡ ಸಿನಿಮಾ ಕಲಾವಿದರು ಪಾಲ್ಗೋಳ್ಳಲಿದ್ದಾರೆ.

ವಿವಿಧ ಪಕ್ಷಗಳ ಪ್ರಮುಖ ರಾಜಕಾರಣಿಗಳು ಈಗಾಗಲೇ ಗೋವಾದಲ್ಲಿ ಬೀಡು ಬಿಟ್ಟಿದ್ದಾರೆ. ಒಂದು ವೇಳೆ ಸೋನಿಯಾ ಮತ್ತು ರಾಹುಲ್ ಆರತಕ್ಷತೆಗೆ ಆಗಮಿಸಿದರೇ ಅದು ತಮ್ಮಅದೃಷ್ಟ ಎಂದು ಮೋಹನ್ ರೆಡ್ಡಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಿರುವ ಕಾರಣ ವೈದ್ಯರ ಸಲಹೆ ಮೇರೆಗೆ ಸೋನಿಯಾ ಗಾಂಧಿ ಅವರು ಗೋವಾಗೆ ಶಿಫ್ಟ್ ಆಗಿದ್ದಾರೆ. ಇನ್ನೂ ಕೆಲ ಕಾಲ ಅವರು ಗೋವಾದಲ್ಲಿಯೇ ಉಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ,  

ಕಳೆದ ಶುಕ್ರವಾರ ಡಾಬೋಲಿನ್ ಅಂತರಾಷ್ಟ್ರೀ ವಿಮಾನ ನಿಲ್ದಾಣದಿಂದ ದಿ ಲೀಲಾ ಹೋಟೆಲ್ ಗೆ ಬಂದಿಳಿದಿದ್ದಾರೆ. ಇನ್ನೂ ಕೆಲವು ದಿನಗಳವರೆಗೆ ಸೋನಿಯಾ ಗೋವಾದಲ್ಲಿಯೇ ಉಳಿಯಲಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಂಬಂಧಿಗಳು ಮಂಗಳವಾರವೇ ಗೋವಾಗೆ ಬಂದಿದ್ದು ಕಾರ್ಯಕ್ರಮಕ್ಕಾಗಿ ಸಿದ್ಧತೆ ನಡೆಸುತ್ತಿದ್ದಾರೆ. ಮದುವೆ ಸಂಬಂಧಿತ ಸಂಪ್ರದಾಯಗಳು ಬುಧವಾರ ಬೆಳಗ್ಗೆಯಿಂದ ಆರಂಭವಾಗಿದ್ದು,  ಶುಕ್ರವಾರ ಪೂರ್ಣಗೊಳ್ಳಲಿದೆ ಎಂದು ಮೋಹನ್ ರೆಡ್ಡಿ ತಿಳಿಸಿದ್ದಾರೆ. ಶುಕ್ರವಾರ ಸಂಜೆ ಆರತಕ್ಷತೆ ನಡೆಯಲಿದ್ದು, ಭದ್ರಾವತಿಯಲ್ಲಿ ಎರಡು ಕುಟುಂಬಸ್ಥರು ಅದ್ದೂರಿ ನಿಶ್ಚಿತಾರ್ಥ ನಡೆಸಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT