ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹ ಸಮಾರಂಭ 
ರಾಜ್ಯ

ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರನ ವಿವಾಹಕ್ಕೆ ಗಣ್ಯರ ದಂಡು: ಸೋನಿಯಾ, ರಾಹುಲ್ ಗಾಂಧಿ ಭಾಗಿ ಸಾಧ್ಯತೆ

ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ. ಶಿವಕುಮಾರ್‌ ಪುತ್ರಿ ಡಾ.ಹಿತಾ ಅವರ ವಿವಾಹ ಗೋವಾದ ಲೀಲಾ ಪ್ಯಾಲೇಸ್‌ ಹೋಟೆಲ್‌ನಲ್ಲಿ ನ. 27ರಂದು ಅದ್ಧೂರಿಯಾಗಿ ನಡೆಯಲಿದೆ.

ಬೆಳಗಾವಿ: ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಮತ್ತು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ ಅವರ ಸಹೋದರ ಬಿ.ಕೆ. ಶಿವಕುಮಾರ್‌ ಪುತ್ರಿ ಡಾ.ಹಿತಾ ಅವರ ವಿವಾಹ ಗೋವಾದ ಲೀಲಾ ಪ್ಯಾಲೇಸ್‌ ಹೋಟೆಲ್‌ನಲ್ಲಿ ನ. 27ರಂದು ಅದ್ಧೂರಿಯಾಗಿ ನಡೆಯಲಿದೆ.

ಕಾಕತಾಳೀಯ ಎಂಬಂತೆ ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಕೂಡ ಗೋವಾದಲ್ಲಿಯೇ ಸದ್ಯ ವಾಸ್ತವ್ಯ ಹೂಡಿದ್ದು  ಶುಕ್ರವಾರ ನಡೆಯುವ ಆರತಕ್ಷತೆಯಲ್ಲಿ ಪಾಲ್ಗೋಳ್ಳುವ ಸಾಧ್ಯತೆಯಿದೆ.

ಸೋನಿಯಾ ಮತ್ತು ರಾಹುಲ್ ಗಾಂಧಿ ಅವರನ್ನು ವಿವಾಹಕ್ಕೆ ಆಮಂತ್ರಿಸಲಾಗಿದೆ. ರೆಸಾರ್ಟ್ ನಲ್ಲಿ ಉತ್ತಮ ಭದ್ರತಾ ವ್ಯವಸ್ಥೆ ಮಾಡಲಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಮೋಹನ್ ರೆಡ್ಡಿ ತಿಳಿಸಿದ್ದಾರೆ.

ಇನ್ನೂ ಮೃಣಾಲ್ ಮತ್ತು ಡಾ.ಹಿತ ಅವರ ವಿವಾಹ ಆರತಕ್ಷತೆಗೆ ಕೊರೋನಾ ಕಾರಣದಿಂದ ಕೇವಲ 500 ಗಣ್ಯರಿಗೆ  ಮಾತ್ರ ಆಹ್ವಾನ ನೀಡಲಾಗಿದೆ, ಕಾಂಗ್ರೆಸ್ ಸೇರಿದಂತೆ ಹಲವು ಪಕ್ಷದ ಶಾಸಕರು ಮತ್ತು ಕನ್ನಡ ಸಿನಿಮಾ ಕಲಾವಿದರು ಪಾಲ್ಗೋಳ್ಳಲಿದ್ದಾರೆ.

ವಿವಿಧ ಪಕ್ಷಗಳ ಪ್ರಮುಖ ರಾಜಕಾರಣಿಗಳು ಈಗಾಗಲೇ ಗೋವಾದಲ್ಲಿ ಬೀಡು ಬಿಟ್ಟಿದ್ದಾರೆ. ಒಂದು ವೇಳೆ ಸೋನಿಯಾ ಮತ್ತು ರಾಹುಲ್ ಆರತಕ್ಷತೆಗೆ ಆಗಮಿಸಿದರೇ ಅದು ತಮ್ಮಅದೃಷ್ಟ ಎಂದು ಮೋಹನ್ ರೆಡ್ಡಿ ತಿಳಿಸಿದ್ದಾರೆ.

ದೆಹಲಿಯಲ್ಲಿ ಮಾಲಿನ್ಯ ಪ್ರಮಾಣ ಹೆಚ್ಚಿರುವ ಕಾರಣ ವೈದ್ಯರ ಸಲಹೆ ಮೇರೆಗೆ ಸೋನಿಯಾ ಗಾಂಧಿ ಅವರು ಗೋವಾಗೆ ಶಿಫ್ಟ್ ಆಗಿದ್ದಾರೆ. ಇನ್ನೂ ಕೆಲ ಕಾಲ ಅವರು ಗೋವಾದಲ್ಲಿಯೇ ಉಳಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ,  

ಕಳೆದ ಶುಕ್ರವಾರ ಡಾಬೋಲಿನ್ ಅಂತರಾಷ್ಟ್ರೀ ವಿಮಾನ ನಿಲ್ದಾಣದಿಂದ ದಿ ಲೀಲಾ ಹೋಟೆಲ್ ಗೆ ಬಂದಿಳಿದಿದ್ದಾರೆ. ಇನ್ನೂ ಕೆಲವು ದಿನಗಳವರೆಗೆ ಸೋನಿಯಾ ಗೋವಾದಲ್ಲಿಯೇ ಉಳಿಯಲಿದ್ದಾರೆ.

ಲಕ್ಷ್ಮಿ ಹೆಬ್ಬಾಳ್ಕರ್ ಅವರ ಸಂಬಂಧಿಗಳು ಮಂಗಳವಾರವೇ ಗೋವಾಗೆ ಬಂದಿದ್ದು ಕಾರ್ಯಕ್ರಮಕ್ಕಾಗಿ ಸಿದ್ಧತೆ ನಡೆಸುತ್ತಿದ್ದಾರೆ. ಮದುವೆ ಸಂಬಂಧಿತ ಸಂಪ್ರದಾಯಗಳು ಬುಧವಾರ ಬೆಳಗ್ಗೆಯಿಂದ ಆರಂಭವಾಗಿದ್ದು,  ಶುಕ್ರವಾರ ಪೂರ್ಣಗೊಳ್ಳಲಿದೆ ಎಂದು ಮೋಹನ್ ರೆಡ್ಡಿ ತಿಳಿಸಿದ್ದಾರೆ. ಶುಕ್ರವಾರ ಸಂಜೆ ಆರತಕ್ಷತೆ ನಡೆಯಲಿದ್ದು, ಭದ್ರಾವತಿಯಲ್ಲಿ ಎರಡು ಕುಟುಂಬಸ್ಥರು ಅದ್ದೂರಿ ನಿಶ್ಚಿತಾರ್ಥ ನಡೆಸಿದ್ದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT